Advertisement

Army; ಎಲ್ಲ ಸವಾಲುಗಳಿಗೂ ಸೇನೆ ಸನ್ನದ್ಧ: ಜನರಲ್‌ ದ್ವಿವೇದಿ

02:00 AM Jul 02, 2024 | Team Udayavani |

ಹೊಸದಿಲ್ಲಿ: ದೇಶದ ಭದ್ರತೆಗೆ ಸಂಬಂಧಿ ಸಿದಂತೆ ಎಲ್ಲ ರೀತಿಯ ಸವಾಲುಗಳನ್ನು ಮೆಟ್ಟಿ ನಿಲ್ಲಲು ಭೂ ಸೇನೆ ಸಜ್ಜಾಗಿದೆ. ಭೂ ಸೇನೆ, ವಾಯುಪಡೆ ಮತ್ತು ನೌಕಾಪಡೆ ನಡುವಿನ ಸಮನ್ವಯತೆ ಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗುವುದು ನಮ್ಮ ಆದ್ಯತೆ ಯಾಗಿದೆ ಎಂದು ಭೂಸೇನೆಯ ನೂತನ ಮುಖ್ಯಸ್ಥರಾದ ಜ| ಉಪೇಂದ್ರ ದ್ವಿವೇದಿ ಹೇಳಿದ್ದಾರೆ.

Advertisement

30ನೇ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ರೈಸಿನಾ ಹಿಲ್‌ನ ಸೌತ್‌ ಬ್ಲಾಕ್‌ನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಸೇನೆಯು ವಿಭಿನ್ನವಾದ ಕಾರ್ಯಾಚರಣೆ ಸವಾಲುಗಳನ್ನು ಎದುರಿಸುತ್ತಿದೆ. ಎಲ್ಲ ರೀತಿಯ ಸಂಭಾವ್ಯ ಭದ್ರತಾ ಬೆದರಿಕೆಗಳನ್ನು ಎದುರಿಸಲು ಯೋಧರನ್ನು ಆಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸಜ್ಜುಗೊಳಿಸುವ ಪ್ರವೃತ್ತಿ ಮುಂದುವರಿಸಬೇಕಾಗಿದೆ.ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಪ ಕವಾಗಿ ನಿಭಾಯಿಸುವ ಜತೆಗೆ ಯಾವುದೇ ಪರಿಸ್ಥಿತಿಯನ್ನು ಎದುರಿ ಸಲು ಸೇನೆ ಸಜ್ಜಾಗಿದೆ ಎಂಬ ವಿಶ್ವಾಸ ವವನ್ನು ದೇಶವಾಸಿಗಳಿಗೆ ನೀಡುತ್ತಿದ್ದೇನೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next