Advertisement

ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

04:53 PM Nov 11, 2020 | keerthan |

ಹೊಸದಿಲ್ಲಿ: ಅತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ.

Advertisement

ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಆತ್ಮಹತ್ಯೆ ಪ್ರಕರಣದಡಿ ಅರ್ನಾಬ್‌ ಮತ್ತು ಇತರ ಇಬ್ಬರನ್ನು ಅಲಿಬಾಗ್‌ ಪೊಲೀಸರು ನ.4 ರಂದು ಬಂಧಿಸಿದ್ದರು. ಬಂಧಿತರು ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು.

ನ್ಯಾ. ಡಿ.ವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ಸುಪ್ರೀಂ ಕೋರ್ಟ್ ನ ರಜಾಕಾಲದ ಪೀಠ ವಿಚಾರಣೆ ನಡೆಸಿತು. ಅರ್ನಾಬ್ ಪರ ಖ್ಯಾತ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದರು.

ಇದನ್ನೂ ಓದಿ:ಮುಂಬೈ ಟೆರರ್ ಅಟ್ಯಾಕ್ : ಹನ್ನೊಂದು ಉಗ್ರರು ತನ್ನ ದೇಶದವರು ಎಂದು ಒಪ್ಪಿಕೊಂಡ ಪಾಕಿಸ್ತಾನ!

ರಾಜ್ಯ ಸರ್ಕಾರವು ಸಿದ್ಧಾಂತ ಮತ್ತು ಭಿನ್ನಾಭಿಪ್ರಾಯದ ಆಧಾರದ ಮೇಲೆ ಕೆಲವು ವ್ಯಕ್ತಿಗಳನ್ನು ಗುರಿಯಾಗಿಸಿರುವುದು ತೀರಾ ದುರದೃಷ್ಟಕರ ಎಂದ ಪೀಠ ಮಹಾರಾಷ್ಟ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

Advertisement

ಅರ್ಜಿದಾರರ ಸಿದ್ಧಾಂತ ಏನೇ ಇರಲಿ. ರಾಜ್ಯ ಸರ್ಕಾರಗಳು ಹೀಗೆ ಓರ್ವ ವ್ಯಕ್ತಿಯನ್ನು ಗುರಿಯಾಗಿಸುವುದು ಸರಿಯಲ್ಲ. ಹೀಗೆ ಗುರಿಯಾಗಿಸಿದರೆ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಇದೆ ಎನ್ನುವುದನ್ನು ಅರಿಯಬೇಕು’ ಎಂದು ಮಹಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next