Advertisement

ಸೋಂಕಿತರಿಗೆ 8 ಗಂಟೆಯೊಳಗೆ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಾಗುವಂತೆ ವ್ಯವಸ್ಥೆ: ಸಚಿವ ಅಶೋಕ್

04:07 PM Jun 26, 2020 | keerthan |

ಬೆಂಗಳೂರು: ರಾಜಧಾನಿಯಲ್ಲಿ ಸದ್ಯಕ್ಕೆ ಕೋವಿಡ್-19 ಸೋಂಕು ದೃಢಪಟ್ಟ 24 ರಿಂದ 48 ಗಂಟೆಯಲ್ಲಿ‌ ಹಾಸಿಗೆ ಲಭ್ಯವಾಗುತ್ತಿದ್ದು, ಎಂಟು ಗಂಟೆಯೊಳಗೆ ಲಭ್ಯವಾಗುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದರು.

Advertisement

ಮುಖ್ಯಮಂತ್ರಿಗಳ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನಲ್ಲಿ ಲಾಕ್ ಡೌನ್ ಇಲ್ಲ. ಸರ್ಕಾರ ಮಾಡುವುದು ಇಲ್ಲ. ಸೋಂಕಿತರ ಸಂಖ್ಯೆ ಹೆಚ್ಚಾದರೆ ಕಂಠೀರವ ಕ್ರೀಡಾಂಗಣ, ಬಿಐಇಸಿ ಇತರೆ ಕಡೆ ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಸದ್ಯದಲ್ಲೇ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ನೀಲ ನಕ್ಷೆ ಸಿದ್ದಪಡಿಸಲಾಗುವುದು ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಲ್ಲೂ ಹಾಸಿಗೆಗಳನ್ನು ಕಾಯ್ದಿರಿಸಿ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಒಂದೊಮ್ಮೆ ಚಿಕಿತ್ಸೆ ನೀಡದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next