Advertisement

Arrested: ಕೆಲಸ ಕೊಡಿಸುತ್ತೇವೆಂದು  ವಂಚಿಸಿದ ದಂಪತಿ ಬಂಧನ

12:10 PM Feb 21, 2024 | Team Udayavani |

ಬೆಂಗಳೂರು: ಸರ್ಕಾರಿ ಸೌಮ್ಯದ  ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವು ದಾಗಿ ಯುವಕರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ಈಶಾನ್ಯ ವಿಭಾಗದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ದೊಡ್ಡಬೊಮ್ಮಸಂದ್ರದ ಪ್ರಕಾಶ್‌ ಹಾಗೂ ಮಧು ಬಂಧಿತ ದಂಪತಿ. ಬಂಧಿತರಿಂದ 2 ಲಕ್ಷ ರೂ. ನಗದು, ವಿವಿಧ ಕಂಪನಿಯ 4 ಮೊಬೈಲ್‌,   ಬೈಕ್‌, 6 ಬ್ಯಾಂಕ್‌ ಖಾತೆಗಳಿಗೆ ಸೇರಿದ 15 ಕ್ರೆಡಿಟ್‌, ಡೆಬಿಟ್‌ ಹಾಗೂ ಚೆಕ್‌ ಬುಕ್‌ಗಳು, 11 ವಿವಿಧ ಕಂಪನಿಯ ಕೈಗಡಿಯಾರ, ಸಿಮ್‌ ಕಾರ್ಡ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ 6 ಲಕ್ಷ ರೂ. ಪಡೆದುಕೊಂಡಿದ್ದರು. ಕೆಲಸವನ್ನೂ ಕೊಡಿಸಿದೆ, ಹಣ ವಾಪಸ್‌ ನೀಡದೆ ವಂಚಿಸಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು. ಅದನ್ನು ಆಧರಿಸಿ ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲೇ ಮೂರು ಪ್ರಕರಣಗಳು ಪತ್ತೆಯಾಗಿವೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next