Advertisement

ಕಳ್ಳನ ಬಂಧನ: 33 ಸಾವಿರ ರೂ. ಜಪ್ತಿ

12:20 PM Dec 11, 2021 | Team Udayavani |

ಶಹಾಪುರ: ರಾತ್ರಿ ಸಮಯದಲ್ಲಿ ನಗರದ ಅಂಗಡಿ ಮುಂಗಟ್ಟುಗಳ ಸರದಿ ಕಳ್ಳತನಕ್ಕೆ ಹೊಂಚು ಹಾಕಿ ಅಂಗಡಿ ಮತ್ತು ಬೇಕರಿ ಕಳ್ಳತನ ಮಾಡುತ್ತಿದ್ದ ಹೊಸಪೇಟೆ ಮೂಲದ ಆರೋಪಿ ಮಲ್ಲಿಕಾರ್ಜುನ ಕೃಷ್ಣಪ್ಪ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಈಚೆಗೆ ನಗರದ ಬೇಕರಿಯೊಂದರಲ್ಲಿ ಕಳ್ಳತನ ಮಾಡಿ ಮಲ್ಲಿಕಾರ್ಜುನ ಪರಾರಿಯಾಗಿದ್ದ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿಐ ಶ್ರೀನಿವಾಸ ಅಲ್ಲಾಪುರೆ ನೇತೃತ್ವದಲ್ಲಿ ಪಿಎಸ್‌ಐಗಳಾದ ಚಂದ್ರಕಾಂತ ಮೆಕಾಲೆ, ಶಾಮಸುಂದರ್‌ ನಾಯಕ ಮತ್ತು ಕಾನ್ಸಟೇಬಲ್‌ಗ‌ಳಾದ ಬಾಬು ನಾಯ್ಕಲ್‌, ನಾರಾಯಣ, ಭಾಗಣ್ಣ, ಧರ್ಮರಾಜ ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ರಾತ್ರಿ ಗಸ್ತಿನಲ್ಲಿ ಸಂಚರಿಸುವಾಗ ಸಂಶಯಾಸ್ಪದವಾಗಿ ಸುತ್ತಾಡುತ್ತಿದ್ದ ಯುವಕನೊಬ್ಬನನ್ನು ಠಾಣೆಗೆ ಕರೆ ತಂದು ವಿಚಾರಣೆಗೆ ಒಳಪಡಿಸಿದಾಗ ಬೇಕರಿ ಕಳುವು ಮಾಡಿರುವುದಾಗಿ ತಿಳಿಸಿದ್ದಾನೆ. ಅಲ್ಲದೇ ಆರೋಪಿತನಿಂದ 33,000ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪಿಐ ಅಲ್ಲಾಪುರೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next