Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ

08:51 PM Mar 31, 2023 | Team Udayavani |

ಶಿರ್ವ: ಇಲ್ಲಿನ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

ಮಂಗಳೂರು ಬಾಳ ಗ್ರಾಮದ ಜೋಕಟ್ಟೆ ಕಾಳಾವರ ಸೈಂಟ್‌ ಜೋಸೆಫ್‌ ಚರ್ಚ್‌ಬಳಿಯ ನಿವಾಸಿ ಹುಸೇನ್‌ ಕಬೀರ್‌ನನ್ನು ಶಿರ್ವ ಪೊಲೀಸ್‌ ಉಪನಿರೀಕ್ಷಕ ರಾಘವೇಂದ್ರ ಸಿ. (ಕಾನೂನು ಮತ್ತು ಸುವ್ಯವಸ್ಥೆ) ಅವರ ಮಾರ್ಗದರ್ಶನದಂತೆ ಎಎಸ್‌ಐ ವಿವೇಕಾನಂದ ಮತ್ತು ಪಿಸಿಗಳಾದ ರಘು,ರಿತೇಶ್‌ ಮತ್ತು ಅಖೀಲ್‌ ಮಾ. 31ರಂದು ಜೋಕಟ್ಟೆಯಲ್ಲಿ ಬಂಧಿಸಿ ಕರೆತಂದಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಈತನ ಮೇಲೆ ಕಾಪು, ಕಾರ್ಕಳ, ಗಂಗೊಳ್ಳಿ, ಭಟ್ಕಳ ನಗರ, ವೇಣೂರು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿರುತ್ತದೆ. ಅಲ್ಲದೆ ಈ ಹಿಂದೆ ಉಡುಪಿ ಜಿಲ್ಲೆಯ ಹಿರಿಯಡ್ಕ, ಪಡುಬಿದ್ರೆ, ಮಣಿಪಾಲ, ಅಜೆಕಾರು, ದ.ಕ. ಜಿಲ್ಲೆಯ ಮಂಗಳೂರು, ಸುರತ್ಕಲ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next