Advertisement

ಬೈಕ್‌ ಕಳವು ಆರೋಪಿಗಳ ಬಂಧನ

12:56 AM Jun 29, 2019 | Team Udayavani |

ಬೆಂಗಳೂರು: ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ನಾಲ್ವರು ಆರೋಪಿಗಳನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಶಿವಾಜಿನಗರದ ನಿವಾಸಿ ಯಾಸೀನ್‌ ಯಾಸರ್‌ ರೆಹಮಾನ್‌ ( 20) ಆರ್‌.ಟಿನಗರದ ನಿವಾಸಿ ನಿಖೀಲ್‌ (19), ನಾಸೀರ್‌ (19) ಹಿಂದೂಪುರದ ಆರೀಫ್ ಉಲ್ಲಾಖಾನ್‌ ( 20) ಬಂಧಿತರು. ಆರೋಪಿಗಳಿಂದ ವಿವಿಧ ಮಾದರಿಯ ಎಂಟು ಲಕ್ಷ ರೂ. ಮೌಲ್ಯದ 16 ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಆರೋಪಿಗಳು ಪರಸ್ಪರ ಸ್ನೇಹಿತರಾಗಿದು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದರು.ಬಳಿಕ ಚಿಕ್ಕಬಳ್ಳಾಪುರ, ಆಂಧ್ರದ ಹಿಂದೂಪುರ ಸೇರಿದಂತೆ ಹೊರ ಜಿಲ್ಲೆಗಳಲ್ಲಿ ಮಾರಾಟ ಮಾಡಿ ಬಂದ ಹಣದಿಂದ ಮೋಜಿನ ಜೀವನ ನಡೆಸುತ್ತಿದ್ದರು.

ಇತ್ತೀಚೆಗೆ ಠಾಣೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಾಸೀನ್‌ ಬೈಕ್‌ ಚಲಾಯಿಸಿಕೊಂಡು ಬಂದವನು ಪೊಲೀಸರನ್ನು ನೋಡಿದ ಕೂಡಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹೀಗಾಗಿ ಅನುಮಾನದ ಮೇರೆಗೆ ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬೈಕ್‌ಕಳವು ಪ್ರಕರಣಗಳ ಬಗ್ಗೆ ಬಾಯ್ಬಿಟ್ಟಿದ್ದ.

ಆರೋಪಿಗಳ ಬಂಧನದಿಂದ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ನಡೆದ 16 ಬೈಕ್‌ ಪ್ರಕರಣಗಳು ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next