Advertisement

Byndoor ಪೊಲೀಸರನ್ನು ಸತಾಯಿಸಿದವನ ಬಂಧನ

12:52 AM Mar 18, 2024 | Team Udayavani |

ಬೈಂದೂರು: ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಭೂಪ ಬೈಂದೂರು ಪೊಲೀಸರ ಅತಿಥಿಯಾಗಿದ್ದಾನೆ.

Advertisement

ಬೈಂದೂರು ಠಾಣೆಯ ಪೊಲೀಸ್‌ ಉಪನಿರೀಕ್ಷಕ ತಿಮ್ಮೇಶ ಬಿ.ಎನ್‌. ಠಾಣೆಯಲ್ಲಿರುವಾಗ ಬಾಗಲ ಕೋಟೆಯ ಪಕೀರಪ್ಪ ಯಲ್ಲಪ್ಪ (30) ಬಂದು ಯಡ್ತರೆ ಗ್ರಾಮದ ಮಧ್ದೋಡಿ ಗೇರು ಹಾಡಿಯಲ್ಲಿ ತಲೆ ಇಲ್ಲದ ಮನುಷ್ಯನ ದೇಹ ಬಿದ್ದಿದೆ ಎಂದನು. ಪೊಲೀಸರು ಆತನ ಜತೆಯಲ್ಲಿ ಹೋಗಿ ಸಾರ್ವಜನಿಕರ ಸಹಕಾರದೊಂದಿಗೆ ಗೇರು  ಹಾಡಿಯಲ್ಲಿ ದಿನವಿಡೀ ಹುಡುಕಿದರೂ ಎಲ್ಲಿಯೂ ಮೃತದೇಹ ಕಂಡು ಬರಲಿಲ್ಲ.

ಆತನು ಬೇರೆ ಬೇರೆ ಕಡೆಯಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇದೆ, ಇಲ್ಲಿ ಇದೆ ಎಂದು ಹೇಳಿದ್ದು ಎಲ್ಲಿ ಹುಡುಕಿದರೂ ಮೃತ ದೇಹ ಕಾಣಿಸಲಿಲ್ಲ. ಮರು ದಿನವೂ ಹುಡುಕಿದ ಪೊಲೀಸರು ಸುಸ್ತಾದರು. ಸುಳ್ಳು ಮಾಹಿತಿ ನೀಡಿದ ಆತನನ್ನು ಬಂಧಿಸಿ, ಪ್ರಕ ರಣ ದಾಖಲಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next