Advertisement

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದ ನಾಲ್ವರ ಬಂಧನ

02:54 PM Jun 02, 2021 | Team Udayavani |

ಮಂಗಳೂರು : ದುರ್ಗಾ ವಾಹಿನಿ ಮಹಿಳಾ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಶರಣ್ ಪಂಪುವೆಲ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ  ಸುದ್ದಿಯನ್ನು ಹಬ್ಬಿಸಿದ್ದ ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ಸಮುದಾಯದ ರಕ್ಕಸರಿಂದ ನಿಮ್ಮ ಮನೆಯ ಹುಡುಗಿಯರನ್ನು ರಕ್ಷಿಸಿ ಎಂಬಿತ್ಯಾದಿ ಬರಹವುಳ್ಳ ಸಂದೇಶಗಳನ್ನು ವಾಟ್ಸಾಪ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಶಂಕರ್(32), ನೌಶದ್ (27), ರವಿ (38), ಜಯ ಕುಮಾರ್(33) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.  ಇವರುಗಳನ್ನು ನಿನ್ನೆ (ಜೂನ್ 1)  ದಸ್ತಗಿರಿ ಮಾಡಲಾಗಿದೆ.

ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರ ನಿರ್ದೇಶನದಂತೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next