Advertisement

ವೃದ್ಧ ದಂಪತಿಗಳ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

01:47 PM Mar 29, 2022 | Team Udayavani |

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ವೃದ್ಧ ದಂಪತಿಗಳ ಪ್ರಕರಣವನ್ನು ಭೇಧಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಗರದ ಇಬ್ಬರು ಅಪ್ರಾಪ್ತರು ಸಹಿತ ಫೈಝ್ (20), ಬಂಧಿತ ಆರೋಪಿಗಳು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್,  ಶಿಡ್ಲಘಟ್ಟ ನಗರದ ಕಾಮಾಟಿಗೆರೆ ಪೇಟೆಯಲ್ಲಿ ಬಟ್ಟೆಯ ವ್ಯಾಪಾರಿ ಶ್ರೀನಿವಾಸ್, ಆತನ ಪತ್ನಿ ಪದ್ಮಾವತಿಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ‌ ಆರೋಪಿಗಳನ್ನು‌ ಶಿಡ್ಲಘಟ್ಟ ನಗರ ಪೊಲೀಸರು ವಿಶೇಷವಾಗಿ ತನಿಖೆ ನಡೆಸಿ ಬಂಧಿಸಲಾಗಿದೆ ಎಂದರು.

ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು ಅದರಲ್ಲಿ ಪ್ರಮುಖವಾಗಿ ಪೇದೆಗಳಾದ ಶ್ರೀಹರಿ,‌ಹರೀಶ್ ಅವರ ವಿಶೇಷ ಶ್ರಮದಿಂದ ಆರೋಪಿಗಳನ್ನು‌ ಬಂಧಿಸಲಾಗಿದ್ದು ತಂಡಕ್ಕೆ ಬಹುಮಾನವನ್ನು ನೀಡುವುದಾಗಿ ಜಿಲ್ಲಾ ಎಸ್ಪಿ ಜಿಕೆ ಮಿಥುನ್ ಕುಮಾರ್ ಘೋಷಿಸಿದರು.

ಇದನ್ನೂ ಓದಿ:ನಲಪಾಡ್ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆಗೆ ಹಲ್ಲೆ, ಕಿರುಕುಳ

Advertisement

ಬಂಧಿತ ಆರೋಪಿಗಳು ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ಭಾಗಿಯಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರ್ಲಹಳ್ಳಿ ಹಾಗೂ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ಧರ್ಮೇಗೌಡ, ಸಬ್ ಇನ್ಸ್ಪೆಕ್ಟರ್ ಸತೀಶ್  ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next