Advertisement

ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್ ಧರಿಸಿದ್ದ ಯುವಕನ ಬಂಧನ

06:31 PM Oct 01, 2022 | Team Udayavani |

ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್ ಧರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ  ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪ ಶನಿವಾರ (ಅ.1ರಂದು) ನಡೆದಿದೆ.

Advertisement

ವಿಜಯಪುರ ಜಿಲ್ಲೆಯ ಸಿಂಧಗಿಯ ಅಕ್ಷಯ್  ಬಂಧಿತ ಯುವಕ. ರಾಹುಲ್‌ ಗಾಂಧಿಯ ಭಾರತ್‌ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್‌ ಧರಿಸಿ ಹಾಗೂ ಪೇಸಿಎಂ ಬಾವುಟ ಹಿಡಿದು ಭಾಗಿಯಾಗಿದ್ದ ಯುವಕನನ್ನು ಹಿಡಿದು ಬಂಧಿಸಿದ ಪೊಲೀಸರು ಪೇಸಿಎಂ ಟೀ ಶರ್ಟ್ ಬಿಚ್ಚಿಸಿದ ಘಟನೆ ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರ ಎದುರಲ್ಲೇ ಪೊಲೀಸರು ಯುವಕನಿಗೆ ಥಳಿಸಿ ಪೇಸಿಎಂ ಬಾವುಟ ಕಿತ್ತುಕೊಂಡಿದ್ದಾರೆ.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ ಶಿವಕುಮಾರ್ ನೇತೃತ್ವದಲ್ಲಿ ಪೇಸಿಎಂ ಟೀ ಶರ್ಟ್ ಧರಿಸಿದ್ದ ಯುವಕನನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next