Advertisement

ಮನೆಯಲ್ಲಿ ಯಾರೂ ಇಲ್ಲದ ವೇಳೆ 70 ಲಕ್ಷ ದೋಚಿದ್ದ ಅಡುಗೆ ಭಟ್ಟನ ಬಂಧನ

10:40 AM Aug 30, 2020 | Suhan S |

ಬೆಂಗಳೂರು: ಉದ್ಯಮಿ ಮನೆಯಲ್ಲಿ ಲಕ್ಷಾಂತರ ರೂ. ಕಳವು ಮಾಡಿದ್ದ ಅಡುಗೆ ಭಟ್ಟನನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.

Advertisement

ತಮಿಳುನಾಡು ಮೂಲದ ಶಾಂತಕುಮಾರ್‌ ಬಂಧಿತ ಆರೋಪಿ. ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುತ್ತಿದ್ದ ದೇವಿದಾಸ್‌ ಎಂಬುವರ ಮನೆಯಲ್ಲಿ ಕಳೆದೊಂದು ವರ್ಷದಿಂದ ಅಡುಗೆ ಭಟ್ಟನಾಗಿ ಕೆಲಸ ಮಾಡು ತ್ತಿದ್ದ. ಮಾಲೀಕರ ವಿಶ್ವಾಸ ಸಂಪಾದಿಸಿಕೊಂಡಿದ್ದ ಶಾಂತಕುಮಾರ್‌, ಕೋವಿಡ್ ಹಿನ್ನೆಲೆಯಲ್ಲಿ ಹಣದ ಸಮಸ್ಯೆ ಎದುರಿಸುತ್ತಿದ್ದ. ಹೀಗಾಗಿ ಹಣದ ವ್ಯಾಮೋಹಕ್ಕೆ ಬಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಸುಮಾರು 70 ಲಕ್ಷ ರೂ. ಹಣ ಕಳ್ಳತನ ಮಾಡಿ ತಮಿಳುನಾಡಿಗೆ ಓಡಿ ಹೋಗಿದ್ದ. ಕದ್ದ ಹಣದಲ್ಲಿ ಒಂದಷ್ಟು ಲಕ್ಷ ಸಾಲ ತೀರಿಸಿದ್ದಾನೆ.

70 ಲಕ್ಷ ರೂ. ಕದ್ದು ಬಂಧನ ಭೀತಿಯಿಂದ ತಮಿಳುನಾಡು ಹಾಗೂ ಕೇರಳಕ್ಕೆ ತಲೆಮರೆಸಿಕೊಂಡಿದ್ದ. ಅಲ್ಲದೆ ಮಾರ್ಗ ಮಧ್ಯೆ ಈತನಿಂದಲೇ ಬೇರೆ ಆರೋಪಿಗಳು ಐದು ಲಕ್ಷ ರೂ. ಕಳ್ಳತನ ಮಾಡಿದ್ದಾರೆ. ಸದ್ಯ ಬಂಧಿತ  ನಿಂದ 53,70 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಜ್ಞಾನಭಾರತಿ ಠಾಣೆಯಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್‌ಎಂಕೆ ಮನೆಯಲ್ಲಿ ಕೆಲಸಕ್ಕಿದ್ದ  ಆರೋಪಿ : ಆರೋಪಿ ಶಾಂತಕುಮಾರ್‌ ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ. ನಂತರ ಪ್ರತಿಷ್ಠಿತ ಸ್ಟಾರ್‌ ಹೊಟೇಲ್‌ಗ‌ಳಲ್ಲಿ ಅಡುಗೆ ಕೆಲಸಕ್ಕೆ ಸೇರಿಕೊಂಡಿದ್ದ. ಒಂದು ವರ್ಷದಿಂದ ದೇವಿದಾಸ್‌ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next