Advertisement

ಅಂತಾರಾಜ್ಯ ಕಳ್ಳನ ಬಂಧಿಸಿದ ಬನಹಟ್ಟಿ ಪೊಲೀಸರು

07:43 PM May 26, 2021 | Team Udayavani |

ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪೊಲೀಸ್‌ ಠಾಣೆಯ ವ್ಯಾಪ್ತಿಯ ಬನಹಟ್ಟಿ, ನಾವಲಗಿ ಹಾಗೂ ಚಿಮ್ಮಡ ಗ್ರಾಮದಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ವಿಜಯಪುರ ಜಿಲ್ಲೆಯ ಹೊನ್ನಾಳಿ ಗ್ರಾಮದ ಸಂತೋಷ ನಂದಿಹಾಳ ಎಂಬುವನನ್ನು ಬನಹಟ್ಟಿಯ ಪೊಲೀಸರು ಬಂಧಿಸಿ ಅವನಿಂದ 6 ಲಕ್ಷ ಮೌಲ್ಯದ ಚಿನ್ನಾಭರಣ ಮಂಗಳವಾರ ವಶಪಡಿಸಿಕೊಂಡಿದ್ದಾರೆ.

Advertisement

ಸ್ಥಳೀಯ ಸಿಪಿಐ ಜಿ.ಕರುಣೇಶಗೌಡ ಮಾತನಾಡಿ, 2019ರಲ್ಲಿ ವರದಿಯಾಗಿದ್ದ ಪ್ರಕರಣದಲ್ಲಿ ದೊರೆತ ಸಿಸಿ ಟಿ.ವಿ ದೃಶ್ಯಾವಳಿಗಳ ಸುಳಿವನ್ನು ಆಧರಿಸಿ ಸದರಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿ ಸಲಾಗಿದೆ. ಸದರಿ ಕಳ್ಳನಿಂದ 3 ಪ್ರಕರಣಗಳಲ್ಲಿ ಕಳ್ಳತನವಾಗಿದ್ದ ಚಿನ್ನದ 4 ಸರಗಳು, 6 ಉಂಗುರಗಳು, 1 ನಕ್ಲೇಸ್‌ ಸರ್‌ ಸೇರಿದಂತೆ ಇತ್ಯಾದಿ ಸುಮಾರು 6 ಲಕ್ಷ ಮೊತ್ತದ 141 ಗ್ರಾಂ ತೂಕದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

1996ರಿಂದ ಇಲ್ಲಿಯವರೆಗೆ ಈತನ ಮೇಲೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. 2019ರಲ್ಲಿ ಈತನು ರಾಮದುರ್ಗ ಉಪ ಕಾರಾಗೃಹದಿಂದಲೂ ತಪ್ಪಿಸಿಕೊಂಡು ಹೋಗಿದ್ದನು. ಅಲ್ಲದೇ ಮುಧೋಳ, ಲೋಕಾಪುರ, ರಾಮದುರ್ಗ, ನಿಂಬರ್ಗಾ, ಮಧನ ಹಿಪ್ಪರಗಾ, ಇಳಕಲ್ಲ ಪೊಲೀಸ್‌ ಠಾಣೆಗಳ 16 ಪ್ರಕರಣಗಳಲ್ಲಿ ನ್ಯಾಯಾಲಯವು ಈತನ ಬಂಧನ ವಾರಂಟ್‌ ಹೊರಡಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್‌, ಡಿವೈಎಸ್ಪಿ ಎಂ.ಪಾಂಡುರಂಗಯ್ಯ ಮಾರ್ಗದರ್ಶನದಲ್ಲಿ ಸ್ಥಳೀಯ ಸಿಪಿಐ ಎರಡು ವರ್ಷಗಳಷ್ಟು ಹಳೆಯದಾದ ಪ್ರಕರಣದ ತನಿಖೆಯನ್ನು ನಡೆಸಿ ಪಿಎಸ್‌ಐ ರವಿಕುಮಾರ ಧರ್ಮಟ್ಟಿ ಹಾಗೂ ಠಾಣೆಯ ಸಿಬ್ಬಂದಿ ವರ್ಗದವರು ಕೂಡಿಕೊಂಡು ಕಳ್ಳನನ್ನು ಬಂ ಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರೊಬೆಶನರಿ ಪಿಎಸ್‌ಐ ಮಲ್ಲಿಕಾರ್ಜುನ ತಳವಾರ, ವಿ.ಎಸ್‌. ಅಜ್ಜನಗೌಡರ, ಎ. ಎಂ. ಜಮಖಂಡಿ, ಎಸ್‌. ಆರ್‌. ಮುರಡಿ, ವಿಜಯ ತುಂಬದ, ಎಸ್‌.ಎಚ್‌.ನಾಟಿಕರ್‌, ಮಹೇಶ ಹನಗಂಡಿ, ಡಿ.ವೈ.ಗುರಿಕಾರ ಎಲ್‌.ಜಿ.ಕುಂಬಾರ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next