Advertisement

ಭಾರತದ ಮೇಲೆ ದಾಳಿ ಮಾಡಲು ಬಂದು ಬಂಧಿಯಾಗಿದ್ದ ಪಾಕ್ ಉಗ್ರ ಹೃದಯಾಘಾತದಿಂದ ಸಾವು

08:05 AM Sep 04, 2022 | Team Udayavani |

ಜಮ್ಮು : ಎರಡು ವಾರಗಳ ಹಿಂದೆ ಸೇನಾ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ವೇಳೆ ಭಾರತೀಯ ಸೇನೆಯಿಂದ ಬಂಧಿಸಲ್ಪಟ್ಟಿದ್ದ ಪಾಕಿಸ್ತಾನದ ಭಯೋತ್ಪಾದಕ ಹೃದಯಾಘಾತದಿಂದ ಶನಿವಾರ ಸಾವನ್ನಪ್ಪಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಸೇನಾ ಆಸ್ಪತ್ರೆಯಲ್ಲಿ ಈತ ಚಿಕಿತ್ಸೆ ಪಡೆಯುತ್ತಿದ್ದ.

Advertisement

ತಬ್ರಕ್ ಹುಸೇನ್ ಎಂದು ಗುರುತಿಸಲಾದ ಭಯೋತ್ಪಾದಕ ಕಳೆದ ತಿಂಗಳು ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್‌ನಲ್ಲಿ ಎಲ್‌ಒಸಿ ನುಸುಳಲು ಪ್ರಯತ್ನಿಸಿದ್ದ. ಈ ವೇಳೆ ಸೇನೆಯ ಗುಂಡಿನ ದಾಳಿಯಲ್ಲಿ ಆತ ಗಾಯಗೊಂಡಿದ್ದ. ಸೇನಾ ಆಸ್ಪತ್ರೆಯಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗುತಿತ್ತು ಈ ವೇಳೆ ವಿಚಾರಣೆ ನಡೆಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಾಹುತಿ ದಾಳಿ ನಡೆಸಲು ಪಾಕಿಸ್ತಾನದ ಸೇನೆಯು ತನ್ನನ್ನು ಕಳುಹಿಸಿಕೊಟ್ಟಿದ್ದಾಗಿ ಒಪ್ಪಿಕೊಂಡಿದ್ದ, ಆದರೆ ಶನಿವಾರ ಹೃದಯಾಘಾತಗೊಂಡು ಉಗ್ರ ಸಾವನ್ನಪಿದ್ದಾನೆ.

ಪಾಕ್ ಆಕ್ರಮಿತ ಕಾಶ್ಮೀರದ ಸಬ್ಜ್‌ಕೋಟ್ ಗ್ರಾಮದ ನಿವಾಸಿ ಹುಸೇನ್ ಭಾರತೀಯ ಸೇನಾ ಶಿಬಿರದ ಮೇಲೆ ದಾಳಿ ಮಾಡುವ ಯೋಜನೆಯನ್ನು ಒಪ್ಪಿಕೊಂಡಿದ್ದಾನೆ ಅಲ್ಲದೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಕರ್ನಲ್ ಯೂನಸ್ ಚೌಧರಿ ದಾಳಿ ನಡೆಸಲು ತನಗೆ 30,000 ಪಾಕಿಸ್ತಾನಿ ರೂಪಾಯಿಗಳನ್ನು ಪಾವತಿಸಿದ್ದರು ಎಂದು ಹೇಳಿಕೊಂಡಿದ್ದ.

ಇದನ್ನೂ ಓದಿ : ಚಾಮರಾಜನಗರ : ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ, ಪೊಲೀಸ್ ಬಿಗಿ ಬಂದೋಬಸ್ತ್

Advertisement

Udayavani is now on Telegram. Click here to join our channel and stay updated with the latest news.

Next