Advertisement

ಬಂಟ್ವಾಳದ ಅರುಣ್‌ ಶ್ಯಾಮ್‌ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌

11:50 PM Sep 08, 2020 | mahesh |

ಬೆಂಗಳೂರು: ಹೈಕೋರ್ಟ್‌ ವಕೀಲ ಅರುಣ್‌ ಶ್ಯಾಮ್‌ ಅವರನ್ನು ಹೆಚ್ಚುವರಿ ಅಡ್ವೋಕೇಟ್‌ ಜನರಲ್‌-1 ಆಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Advertisement

ಬಂಟ್ವಾಳ ತಾಲೂಕಿನ ಪಂಜಿ ಗದ್ದೆಯವರಾದ ಅರುಣ್‌ ಶ್ಯಾಮ್‌, ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಕುವೆಂಪು ವಿ.ವಿ.ಯಲ್ಲಿ ಎಲ್‌ಎಲ್‌ಎಂ ಮುಗಿಸಿ ಹೈಕೋರ್ಟ್‌ನಲ್ಲಿ ವೃತ್ತಿ ಪ್ರಾರಂಭಿಸಿದ್ದರು. ರಾಷ್ಟ್ರೀಯ ಕಾನೂನು ಶಾಲೆಯ ಅಕಾಡೆಮಿಕ್‌ ಕೌನ್ಸಿಲ್‌ ಸದಸ್ಯರಾಗಿದ್ದಾರೆ.

ಈ ಹಿಂದೆ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಆಗಿದ್ದ ಆರ್‌. ನಟರಾಜ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಅರುಣ್‌ ಶ್ಯಾಮ್‌ ಅವರನ್ನು ನೇಮಕ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next