Advertisement

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ : ಅರುಣ್‌ ಸಿಂಗ್‌

12:07 PM Dec 28, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

Advertisement

ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿಗೆ ಆಗಮಿಸಿರುವ ಅವರು ಸುದ್ದಿಗಾರರಿಗೆ ಈ ವಿಚಾರ ತಿಳಿಸಿದ್ದರೆ. ಬೊಮ್ಮಾಯಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಮೇಲಾಗಲಿ, ಸಂಪುಟದ ಸದಸ್ಯರ ಮೇಲಾಗಲಿ ಯಾವುದೇ ಆರೋಪವಿಲ್ಲ. ಹೀಗಾಗಿ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

ಸಿಎಂ ಬದಲಾವಣೆ ಎಂಬುದು ಕಪೋಲಕಲ್ಪಿತ ವಿಚಾರ. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್‌ ಒಡೆದ ಮನೆಯಾಗಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಡ್ಡಾ ಇಲ್ಲ : ಕೋವಿಡ್‌ ನಿಯಮಾವಳಿ ಪಾಲನೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಈ ಸಭೆಯಲ್ಲಿ ಭಾಗವಹಿಸುತ್ತಿಲ್ಲ. 600 ಜನರು ಭಾಗವಹಿಸಬೇಕಿದ್ದ ಸಭೆಯನ್ನು 300ಕ್ಕೆ ಇಳಿಸಲಾಗಿದೆ. ಮೆರವಣಿಗೆಯನ್ನೂ ಸ್ಥಗಿತಗೊಳಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next