Advertisement

ಅರುವತ್ತೋಕ್ಲು ಕಾಡ್ಲಯ್ಯಪ್ಪ ದೇವಸ್ಥಾನದ ರಸ್ತೆ ಡಾಮರಿಗೆ  ಚಾಲನೆ

12:04 PM Feb 24, 2017 | Team Udayavani |

ಗೋಣಿಕೊಪ್ಪ: ಅರುವತ್ತೋಕ್ಲು ಕಾಡ್ಲಯ್ಯಪ್ಪ ದೇವಸ್ಥಾನದ ರಸ್ತೆ ಡಾಮರೀಕರಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

Advertisement

ಶಾಸಕರ ಅನುದಾನದಲ್ಲಿ 5 ಲಕ್ಷ ಮತ್ತು ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ ಅವರ ಅನುದಾನದಲ್ಲಿ 5 ಲಕ್ಷ ಒಟ್ಟು 10 ಲಕ್ಷಅನುದಾನದಲ್ಲಿ ಡಾಮರೀಕರಣಕ್ಕೆ ಚಾಲನೆ ನೀಡಲಾಗಿದೆ. ದೇವಸ್ಥಾನದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಭಾಗದ ಜನರು ಹಲವು ಬಾರಿ ರಸ್ತೆ ಅಭಿವೃದ್ದಿಗೆ ಮನವಿ ಸಲ್ಲಿಸಿದ್ದರು.

ಈ ಬಾರಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಿ ಮಾರ್ಚ್‌ ತಿಂಗಳಲ್ಲಿ ನಡೆಯುವ ಹಬ್ಬದ ಸಂಭ್ರಮಕ್ಕೆ ದೇವಸ್ಥಾನದ ಮುಖ್ಯ ರಸ್ತೆಯ ಡಾಮರೀಕರಣ ಮಾಡಲಾಗುವುದು ಎಂದು ಶಾಸಕ ಕೆ.ಜಿ. ಬೋಪಯ್ಯ ಮಾಹಿತಿ ನೀಡಿದರು. ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್‌, ಅರುವತ್ತೋಕ್ಲು ಸ್ಥಾನೀಯ ಸಮಿತಿ ಅಧ್ಯಕ್ಷ ಮನೆಯಪಂಡ ಬೋಪಣ್ಣ ಮೊದಲಾದವರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next