Advertisement

Delhi ಸರ್ಕಾರ ಉರುಳಿಸಲು 7 ಆಪ್ ಶಾಸಕರಿಗೆ ಬಿಜೆಪಿ ಗಾಳ.. 25 ಕೋಟಿ ಆಮಿಷ: ಕೇಜ್ರಿವಾಲ್ ಆರೋಪ

12:08 PM Jan 27, 2024 | Team Udayavani |

ನವದೆಹಲಿ: ತಮ್ಮ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿದ ಅವರು ದೆಹಲಿ ಸರ್ಕಾರವನ್ನು ಕೆಡವಲು ದೊಡ್ಡ ಮಟ್ಟದ ಪಿತೂರಿ ನಡೆಸಲಾಗುತ್ತಿದೆ ಜೊತೆಗೆ ನಮ್ಮ ಪಕ್ಷದ ಏಳು ಶಾಸಕರಿಗೆ ಭಾರತೀಯ ಜನತಾ ಪಕ್ಷಕ್ಕೆ ಸೇರಲು 25 ಕೋಟಿ ರೂಗಳ ಆಮಿಷ ಒಡ್ಡಲಾಗಿದೆ ಎಂದು ಶನಿವಾರ ಹೇಳಿದ್ದಾರೆ.

ಅಲ್ಲದೆ ಸಾಮಾಜಿಕ ಜಾಲತಾಣ ಟ್ವಿಟರ್ X ನಲ್ಲಿ ಬರೆದಿರುವಂತೆ ಈಗಾಗಲೇ ನಾನು ನನ್ನ ಪಕ್ಷದ ಏಳು ಮಂದಿ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಈ ವೇಳೆ ತಿಳಿದ ವಿಚಾರವೇನೆಂದರೆ ಮುಂದಿನ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಇದಾದ ಬಳಿಕ ಶಾಶಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯವನ್ನು ನಾವು ನಡೆಸುವುದಾಗಿ ಬಿಜೆಪಿ ತಯಾರಿ ನಡೆಸಿದೆ ಎಂದು ಬರೆದುಕೊಂಡಿದ್ದಾರೆ.
ಇದರ ಮುಂದುವರೆದ ಭಾಗವಾಗಿ ಆಪ್ ನ ಇಪ್ಪತ್ತೊಂದು ಶಾಸಕರನ್ನು ಬಿಜೆಪಿ ಸಂಪರ್ಕ ಮಾಡಿದ್ದು ಅವರಿಗೆ ೨೫ ಕೋಟಿ ಆಮಿಷ ನೀಡಲಾಗಿದೆ. ಬಿಜೆಪಿಗೆ ಸೇರಿದ ಶಾಸಕರಿಗೆ ಪಕ್ಷದಿಂದ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ಹೇಳಿಕೊಂಡಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಬಿಜೆಪಿ ಸಂಪರ್ಕಿಸಿದ ಏಳು ಶಾಸಕರು ಬಿಜೆಪಿ ಸೇರಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ. ಇದರಿಂದಲೇ ಅರ್ಥವಾಗುತ್ತೆ ಇಡಿ ಅಧಿಕಾರಿಗಳು ನನಗೆ ನೀಡಿದ ಸಮನ್ಸ್ ಹಿಂದೆ ಯಾರ ಕೈವಾಡ ಇದೆ ಎಂಬುದು ಇದು ಕೇವಲ ನನ್ನ ವಿಚರೆಣೆಗೆ ಅಲ್ಲ ಬದಲಾಗಿ ನನ್ನನ್ನು ಚುನಾವಣೆಯಿಂದ ದೂರ ಉಳಿಯುವಂತೆ ಮಾಡಲು ಬಿಜೆಪಿ ಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next