Advertisement

ಪ್ರಾಣ ತ್ಯಾಗಕ್ಕೂ ಸಿದ್ಧ :ಮಾರ್ಚ್‌ 1 ರಿಂದ ಕೇಜ್ರಿ ಉಪವಾಸ ಸತ್ಯಾಗ್ರಹ

01:24 PM Feb 23, 2019 | Team Udayavani |

ಹೊಸದಿಲ್ಲಿ : ದೆಹಲಿಗೆ ಪೂರ್ಣ ರಾಜ್ಯ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಮಾರ್ಚ್‌ 1 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದಾರೆ. 

Advertisement

ದೆಹಲಿ ವಿಧಾನಸಭೆಯಲ್ಲಿ ಬಜೆಟ್‌ ಅಧಿವೇಶನದ ಚರ್ಚೆಯಲ್ಲಿ ಮಾತನಾಡಿದ ಕೇಜ್ರಿವಾಲ್‌ ಕೇಂದ್ರ ಸರಕಾರದ ವಿರುದ್ಧ ಕಿಡಿ ಕಾರಿದರು. ಅಧಿಕಾರ ವ್ಯಾಪ್ತಿಯ ಕೊರೆತೆಯಿಂದಾಗಿ ದೆಹಲಿ ನಗರದ ಜನತೆಯ ಪರವಾಗಿ ನಮಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು. 

ಪೂರ್ಣ ರಾಜ್ಯ ಸ್ಥಾನಮಾನಕ್ಕಾಗಿ ನಾನು ಮಾರ್ಚ್‌ 1 ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇನೆ. ಜನರು ನಮಗೆ ಬಹಳಷ್ಟು ನೀಡಿದ್ದಾರೆ. ಅವರಿಗಾಗಿ ನಾನು ಪ್ರಾಣ ತ್ಯಾಗ ಮಾಡುವುದು ನಮಗೆ ದೊಡ್ಡ ವಿಚಾರವಲ್ಲ ಎಂದರು. 

ಇದೇ ವೇಳೆ ದೆಹಲಿಗೆ ಪೂರ್ಣ ರಾಜ್ಯ ಸ್ಥಾನಮಾನ ದೊರಕುವ ವರೆಗೆ ನಾನು ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next