Advertisement

ಗೋವಾ ಟ್ಯಾಕ್ಸಿ ಚಾಲಕರಿಗೆ 4 ವಿಶೇಷ ಯೋಜನೆ ಘೋಷಿಸಿದ ಕೇಜ್ರಿವಾಲ್

05:28 PM Nov 17, 2021 | Team Udayavani |

ಪಣಜಿ: ಅಟೊ/ಟ್ಯಾಕ್ಸಿ ಚಾಲಕರಿಗಾಗಿ ಮಹಾಮಂಡಳ ಸ್ಥಾಪನೆ ಮಾಡಲಾಗುವುದು, ಚಾಲಕರಿಗೆ ಅಪಘಾತವಾದರೆ ವೈದ್ಯಕೀಯ ಖರ್ಚನ್ನು ಸರ್ಕಾರ ಭರಿಸಲಿದೆ, ಫೆಸ್‍ಲೆಸ್ ಆಟಿಒ ಸೇವೆ, ಡಿಜಿಟಲ್ ಮೀಟರ್ ಅಳವಡಿಕೆಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟಿನಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿರಿವಾಲ್ ಹೇಳಿದರು.

Advertisement

ಬುಧವಾರ ದಾಬೋಲಿಂನ ಸಭೆಯಲ್ಲಿ ಮಾತನಾಡಿರುವ ಅವರು, ಗೋವಾ ಟ್ಯಾಕ್ಸಿ ಚಾಲಕರಿಗಾಗಿ 4 ಹೊಸ ಘೋಷಣೆಯನ್ನು ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಳವಾರ ಗೋವಾಕ್ಕೆ ಆಗಮಿಸಿದ್ದು ಗೋವಾದಲ್ಲಿ ಪಕ್ಷ ಸಂಘಟನೆ ಮತ್ತು ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಗೋವಾದಲ್ಲಿ ಫೆಬ್ರವರಿ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ವಿವಿಧ ರಾಜಕೀಯ ಪಕ್ಷಗಳು ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿವೆ. ಗೋವಾದಲ್ಲಿ ಸರ್ಕಾರ ಸ್ಥಾಪನೆ ಮಾಡುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಕೂಡ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದು, ಗೋವಾದ ಎಲ್ಲ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಸ್ಫರ್ಧಿಸುವುದಾಗಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next