Advertisement

Wrestlers ಪ್ರತಿಭಟನಾ ಸ್ಥಳದಲ್ಲಿ ಅರವಿಂದ್ ಕೇಜ್ರಿವಾಲ್; ಕಠಿಣ ಶಿಕ್ಷೆಯಾಗಬೇಕು

07:32 PM Apr 29, 2023 | Team Udayavani |

ಹೊಸದಿಲ್ಲಿ : ಲೈಂಗಿಕ ಕಿರುಕುಳದ ಆರೋಪದ ಮೇಲೆ ಕ್ರೀಡಾ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿಯಾದರು ದೇಶದ ಅಗ್ರ ಅಥ್ಲೀಟ್‌ಗಳ ಪ್ರತಿಭಟನೆಗೆ ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು.

Advertisement

ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಸೇರಿದಂತೆ ಇತರರು, ಪೊಲೀಸ್ ನಿಷ್ಕ್ರಿಯತೆಯನ್ನು ಆರೋಪಿಸಿ ಸುಪ್ರೀಂ ಕೋರ್ಟ್ ಸಂಪರ್ಕಿಸಿದ ಬಳಿಕ, ಕೋರ್ಟ್ ಆದೇಶದ ನಂತರ ದೆಹಲಿ ಪೊಲೀಸರು ಶುಕ್ರವಾರ ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ವಾರದ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿಲ್ಲ. ಬಿಜೆಪಿ ಸಂಸದರಾಗಿರುವ ಸಿಂಗ್ ಅವರನ್ನು ಬಂಧಿಸಬೇಕೆಂದು ಅವರ ಬೇಡಿಕೆಯಾಗಿದೆ.

“ಕ್ರೀಡಾಪಟುಗಳು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಆದರೆ ಒಂದು ವಾರದಿಂದ ಅವರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕುಳಿತಿದ್ದಾರೆ ಏಕೆ? ದೊಡ್ಡ ರಾಜಕಾರಣಿಯೊಬ್ಬರು ಮಹಿಳೆಯರು ಮತ್ತು ದೇಶವನ್ನು ಹೆಮ್ಮೆಪಡುವ ನಮ್ಮ ಸಹೋದರಿಯರಿಗೆ ತಪ್ಪು ಮಾಡಿದ್ದಾರೆ” ಎಂದು ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳ ನಡುವೆ ನಿಂತು ಕೇಜ್ರಿವಾಲ್ ಸುದ್ದಿಗಾರ ಎದುರು ಆಕ್ರೋಶ ಹೊರ ಹಾಕಿದರು.

“ದೇಶಕ್ಕೆ ಕೀರ್ತಿ ತಂದಿರುವ ಈ ಮಹಿಳಾ ಆಟಗಾರರೆಲ್ಲರೂ ನಮ್ಮ ಹೆಣ್ಣುಮಕ್ಕಳು. ಅವರಿಗೆ ನ್ಯಾಯ ಸಿಗಬೇಕು. ಆರೋಪಿ ಎಷ್ಟೇ ಶಕ್ತಿಶಾಲಿಯಾಗಿದ್ದರೂ ಆತನಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next