Advertisement

ED ಕಸ್ಟಡಿಯಿಂದಲೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್‌! ಭಾವುಕರಾದ ಸಚಿವೆ

01:15 PM Mar 24, 2024 | sudhir |

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಳೆದ ವಾರ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದು ಇದೀಗ ಅವರು ಕಸ್ಟಡಿಯಲ್ಲಿದ್ದುಕೊಂಡೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ.

Advertisement

ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಸರಕಾರ ನಡೆಸುತ್ತಿರುವ ಮೊದಲ ಮುಖ್ಯಮಂತ್ರಿಯಾಗಿದ್ದು ಅದರಂತೆ ದೆಹಲಿಯ ಕೆಲ ಭಾಗಗಳಲ್ಲಿ ತಲೆದೋರಿದ ನೀರಿನ ಸಮಸ್ಯೆಗಳ ಕುರಿತು ಆದೇಶವೊಂದನ್ನು ಶನಿವಾರ ದೆಹಲಿ ಜಲ ಸಚಿವೆ ಅತಿಶಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಸಚಿವೆ ಅತಿಶಿ ಮುಖ್ಯಮಂತ್ರಿಯವರು ತಮ್ಮ ನೋವಿನಲ್ಲೂ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉತ್ತಮ ಮನಸ್ಸನ್ನು ಹೊಂದಿದ್ದಾರೆ ಎಂದು ಹೇಳಿ ಭಾವುಕರಾಗಿದ್ದಾರೆ.

ಕೇಜ್ರಿವಾಲ್ ಕಳುಹಿಸಿದ ಆದೇಶದಲ್ಲಿ ನಗರದ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು. ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೀರಿನ ಟ್ಯಾಂಕರ್‌ಗಳನ್ನು ನಿಯೋಜಿಸಲು ಅವರು ಸೂಚಿಸಿದ್ದಾರೆ, ಎಂದು ಅತಿಶಿ ಉಲ್ಲೇಖಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next