Advertisement

ದಿಲ್ಲಿ ಸಿಎಸ್‌ ಹಲ್ಲೆ:ಚಾರ್ಜ್‌ಶೀಟ್‌ನಲ್ಲಿ ಕೇಜ್ರಿ, ಸಿಸೋಡಿಯಾ ಆರೋಪಿ

04:40 PM Aug 13, 2018 | udayavani editorial |

ಹೊಸದಿಲ್ಲಿ : ದಿಲ್ಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್‌ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರು ಇಂದು ಸೋಮವಾರ ಸಲ್ಲಿಸಿರುವ ಚಾರ್ಜ್‌ ಶೀಟ್‌ನಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಮತ್ತು ಇತರ 11 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

Advertisement

ಮುಖ್ಯ ಕಾರ್ಯದರ್ಶಿ ಮೇಲೆ ನಡೆದಿದ್ದ ಈ ಹಲ್ಲೆ ಘಟನೆ ದಿಲ್ಲಿ ಸರಕಾರ ಮತ್ತು ನೌಕರಶಾಹಿ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು. 

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನಿವಾಸದಲ್ಲಿ ಸಭೆಯ ಕರೆಯಲಾದ ಸಂದರ್ಭದಲ್ಲಿ ಆಪ್‌ ಶಾಸಕ ಅಮಾನತುಲ್ಲ ಮತ್ತು ಇನ್ನೋರ್ವ ಶಾಸಕ, ಕೇಜ್ರಿವಾಲ್‌ ಸಮ್ಮುಖದಲ್ಲೇ ತನ್ನ ಮೇಲೆ ಹಲ್ಲೆ ಮಾಡಿದ್ದರು ಎಂದು ಮುಖ್ಯ ಕಾರ್ಯದರ್ಶಿ ಆರೋಪಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next