Advertisement
ರಾಷ್ಟ್ರಪತಿ ಚುನಾವಣೆಗೆ ಮತಯಾಚನೆಗಾಗಿ ಬುಧವಾರ ಬೆಂಗಳೂರಿಗೆ ಬಂದಿದ್ದ ರಾಮ್ನಾಥ್ ಕೋವಿಂದ್ ಅವರು ರಾಜಭವನ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಏರ್ಪಡಿಸಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಭೆಗೆ ಆಹ್ವಾನಿತರು, ಆಯ್ದ ಮುಖಂಡರನ್ನು ಹೊರತುಪಡಿಸಿ ಉಳಿದವರು ಹೋಟೆಲ್ ಕೊಠಡಿಗೆ ಪ್ರವೇಶಿಸದಂತೆ ಅವರ ಭದ್ರತೆಗೆ ನಿಯೋಜಿಸಿದ್ದ ಎನ್ಎಸ್ಜಿ ಕಮಾಂಡೋಗಳು ನಿರ್ಬಂಧ ಹೇರಿದ್ದರು.
Related Articles
Advertisement
ಘಟನೆ ಸಂಬಂಧ ಯಾರೂ ದೂರು ನೀಡಿಲ್ಲ. ಹೀಗಾಗಿ ಪ್ರಕರಣ ಕೂಡ ದಾಖಲಾಗಿಲ್ಲ. ರಾಮ್ನಾಥ್ ಕೋವಿಂದ್ ಅವರ ಬೇಟಿಗೆ ಅವಕಾಶ ನಿರಾಕರಿಸಿದರು ಎಂಬ ಕಾರಣಕ್ಕೆ ಬಿಜೆಪಿ ಮುಖಂಡರ ವಿರುದ್ಧ ಘೋಷಣೆ ಕೂಗಿದ ಕೋಲಿ ಸಮುದಾಯದ ಮುಖಂಡರು ಅಲ್ಲಿಂದ ತೆರಳಿದರು ಎಂದು ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಸ್ಪಷ್ಟನೆಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಷ್ಟ್ರಪತಿ ಅಭ್ಯರ್ಥಿ ರಾಮ್ನಾಥ್ ಕೋವಿಂದ್ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಕೋಲಿ ಸಮುದಾಯ ಸೇರಿದಂತೆ ಕೆಲವು ಸಮುದಾಯಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರೇ ಹೊರತು ಯಾರ ಮೇಲೂ ಹಲ್ಲೆ ನಡೆದಿಲ್ಲ. ಅರವಿಂದ ಲಿಂಬಾವಳಿ ಅವರು ತಮ್ಮ ಕಾರಿಗೆ ಹತ್ತುವ ವೇಳೆ ತಳ್ಳಾಟ ನಡೆಯಿತೇ ಹೊರತು ಜಟಾಪಟಿ ನಡೆದಿಲ್ಲ. ಕೋವಿಂದ್ ಅವರು ದೆಹಲಿಗೆ ವಾಪಸಾಗಬೇಕಿದ್ದ ವಿಮಾನದ ಸಮಯ ಬದಲಾವಣೆಯಾಗಿದ್ದರಿಂದ ಅವರು ಎಲ್ಲರನ್ನೂ ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಘಟನೆ ಕುರಿತಂತೆ ರಾಜ್ಯ ಬಿಜೆಪಿ ಓಬಿಸಿ ಮೋರ್ಚಾ ಉಪಾಧ್ಯಕ್ಷ ರಾಜಗೋಪಾಲ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದು, ರಾಮ್ನಾಥ್ ಕೋವಿಂದ್ ಭೇಟಿಗೆ ಅವಕಾಶ ಸಿಗದ ಕಾರಣಕ್ಕೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದು ಹೊರತುಪಡಿಸಿ ಬೇರಾವುದೇ ಘಟನೆ ನಡೆದಿಲ್ಲ. ಅರವಿಂದ ಲಿಂಬಾವಳಿ ನಮ್ಮ ನಾಯಕರಾಗಿದ್ದು, ಅವರ ಬಗ್ಗೆ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.