Advertisement

ಶಾರುಖ್ ಖಾನ್ ಪುತ್ರನಿಗೆ ಸಿಗದ ಜಾಮೀನು |ಅ. 7 ರವರೆಗೆ ಎನ್‍ಸಿಬಿ ಕಸ್ಟಡಿಗೆ

06:14 PM Oct 04, 2021 | Team Udayavani |

ಮುಂಬೈ: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಪ್ರಕರಣದಡಿ ಬಂಧಿತರಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಆದೇಶ ನೀಡಿದೆ.

Advertisement

ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಶನಿವಾರ ರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು.

ಇಂದು ಮುಂಬೈನ ಕಿಲ್ಲಾ ಕೋರ್ಟ್ ನಲ್ಲಿ ಜಾಮೀನು ಅರ್ಜಿ, ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಮಾಡಿದ್ದರ ಬಗ್ಗೆ ವಿಚಾರಣೆ ನಡೆದಿದ್ದು, ಆರ್ಯನ್ ಖಾನ್ ಮತ್ತು ಇಬ್ಬರು ಸಹಚರರನ್ನು ಮತ್ತೆ NCB ಕಸ್ಟಡಿಗೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next