Advertisement

Gurugram; ಬಸ್‌ಗೆ ಬೆಂಕಿ ತಗುಲಿ ಇಬ್ಬರು ಸಾವು, ಹಲವರಿಗೆ ಗಾಯ

01:07 AM Nov 09, 2023 | Team Udayavani |

ಗುರುಗ್ರಾಮ್: ಜೈಪುರದಿಂದ ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್‌ಗೆ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಹಠಾತ್ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವರು ಸುಟ್ಟ ಗಾಯಗಳಿಗೆ ಗುರಿಯಾಗಿದ್ದಾರೆ ಎಂದು ಪೊಲೀಸರು  ತಿಳಿಸಿದ್ದಾರೆ.

Advertisement

ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿ , ತತ್ ಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವರುಣ್ ದಹಿಯಾ ತಿಳಿಸಿದ್ದಾರೆ. ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ದಳದ ವಾಹನಗಳನ್ನು ಕರೆಸಲಾಯಿತು ಎಂದು ಹೇಳಿದರು.

ಸ್ಲೀಪರ್ ಬಸ್‌ನಿಂದ ಎರಡು ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next