Advertisement

ಪತ್ನಿಗೆ ಟಿಕೆಟ್‌ ನಿರಾಕರಣೆ: ನಡಹಳ್ಳಿಗೆ ಬೇಸರ

07:40 AM Apr 17, 2018 | |

ಬೆಂಗಳೂರು: ತಮ್ಮ ಪತ್ನಿಗೆ ದೇವರಹಿಪ್ಪರಗಿ ಕ್ಷೇತ್ರದಿಂದ ಟಿಕೆಟ್‌ ಕೊಡಲು ಒಪ್ಪಲಿಲ್ಲ ಎಂದು ಮುನಿಸಿಕೊಂಡು ಬಿಜೆಪಿ ಸೇರಿದ್ದ ಎ.ಎಸ್‌.ಪಾಟೀಲ್‌ ನಡಹಳ್ಳಿ ಇಲ್ಲೂ ಪತ್ನಿಗೆ ಟಿಕೆಟ್‌ ಸಿಗದೆ ಬೇಸರಗೊಂಡಿದ್ದಾರೆ.

Advertisement

ಸೋಮವಾರ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಅವರು, ಪತ್ನಿಗೆ ಟಿಕೆಟ್‌ ಸಿಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

ಮುದ್ದೇಬಿಹಾಳದಿಂದ ಎ.ಎಸ್‌.ಪಾಟೀಲ್‌ ನಡಹಳ್ಳಿಗೆ ಬಿಜೆಪಿ ಟಿಕೆಟ್‌ ನೀಡಲಾಗಿದ್ದು ದೇವರಹಿಪ್ಪರಗಿಯಿಂದಲೂ ಪತ್ನಿಗೆ ಬಿಜೆಪಿ ಟಿಕೆಟ್‌ ಕೇಳಿದ್ದರು. ಆದರೆ, ಆ ಕ್ಷೇತ್ರದಲ್ಲಿ ಸೋಮನಗೌಡ ಪಾಟೀಲ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next