Advertisement

Owaisi: ಇಸ್ರೇಲ್ ಪ್ರಧಾನಿ ಓರ್ವ ದೆವ್ವ, ಕ್ರೂರಿ…: ಎಐಎಂಐಎಂ ಮುಖ್ಯಸ್ಥ ಓವೈಸಿ ಕಿಡಿ

09:32 AM Oct 15, 2023 | Team Udayavani |

ಹೈದರಾಬಾದ್: ಇಸ್ರೇಲ್ ಪ್ರಧಾನಿ ವಿರುದ್ಧ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ನೆತನ್ಯಾಹು ರಾಕ್ಷಸ, ಕ್ರೂರಿ ಮತ್ತು ಯುದ್ಧ ಅಪರಾಧಿ ಎಂದು ಆರೋಪಿಸಿದ್ದಾರೆ.

Advertisement

ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಓವೈಸಿ, ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಸಾವಿರಾರು ಜನರು ಸಾವನ್ನಪ್ಪಿರುವ ಮಧ್ಯೆ ಗಾಜಾದ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ಅವರಿಗೆ ಸಹಾಯ ಮಾಡುವಂತೆ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

“ಇಂದಿಗೂ ಹೋರಾಡುತ್ತಿರುವ ಗಾಜಾದ ವೀರ ಸೈನಿಕರಿಗೆ ಹೃತ್ಪೂರ್ವಕ ನಮನಗಳು! ಅಲಲ್ದೆ ಅವರ ಸಾಧನೆಗೆ ನನ್ನ ನಮನಗಳು ಯಾವುದೇ ಸಂದರ್ಭದಲ್ಲೂ ನಾನು ಪ್ಯಾಲೆಸ್ತೀನ್‌ ಪರವಾಗಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಅಷ್ಟುಮಾತ್ರವಲ್ಲದೆ ನೆತನ್ಯಾಹು ಒಬ್ಬ ದೆವ್ವ, ಕ್ರೂರ ಮತ್ತು ಯುದ್ಧ ಅಪರಾಧಿ ಎನ್ನದು ಹೇಳಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ನಡುವೆ ಸಾವಿರಾರು ಜನರು ಸಾವನ್ನಪ್ಪಿದ ಮತ್ತು ಗಾಯಗೊಂಡಿರುವ ಮಧ್ಯೆ ಗಾಜಾದ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಮತ್ತು ಅವರಿಗೆ ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಪ್ಯಾಲೆಸ್ಟೀನಿಯನ್ನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸುವಂತೆ ನಾನು ಪ್ರಧಾನಿಗೆ ಮನವಿ ಮಾಡಲು ಬಯಸುತ್ತೇನೆ ಎಂದು ಅವರು ಹೇಳಿದ ಅವರು ಪ್ಯಾಲೆಸ್ತೀನ್ ಕೇವಲ ಮುಸ್ಲಿಮರ ವಿಷಯವಲ್ಲ; ಇದು ಮಾನವೀಯ ಸಮಸ್ಯೆಯಾಗಿದ್ದು ಇದಕ್ಕೆ ಒಂದು ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದರು.”

Advertisement

ಈ ಹಿಂದೆ, ಇಸ್ರೇಲ್ ದಾಳಿಯನ್ನು ಖಂಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ‘ಪ್ಯಾಲೆಸ್ತೀನ್ ಹಕ್ಕುಗಳಿಗೆ’ ತನ್ನ ಬೆಂಬಲವನ್ನು ವ್ಯಕ್ತಪಡಿಸಿತ್ತು. ಹಮಾಸ್ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿಯ ಅಲೆಯನ್ನು ಪ್ರಾರಂಭಿಸಿತು, ನೂರಾರು ಜನರನ್ನು ಕೊಂದಿತು, ಇದು ದಶಕಗಳಲ್ಲಿ ಸಂಘರ್ಷದ ಅತಿದೊಡ್ಡ ಉಲ್ಬಣವಾಗಿದೆ.

ಹಮಾಸ್ ನಡೆಸಿದ ದಾಳಿಯಿಂದ ಇಸ್ರೇಲ್‌ನಲ್ಲಿ 1,300 ಕ್ಕೂ ಹೆಚ್ಚು ಜನರನ್ನು ಕೊಂದಿವೆ, ಆದರೆ ಇಸ್ರೇಲಿ ಪ್ರತೀಕಾರದ ವೈಮಾನಿಕ ದಾಳಿಗಳು ಗಾಜಾದಲ್ಲಿ 2,200 ಕ್ಕೂ ಹೆಚ್ಚು ಜನರನ್ನು ಕೊಂದಿವೆ. ಇಸ್ರೇಲ್ ಒಳಗೆ ಸರಿಸುಮಾರು 1,500 ಹಮಾಸ್ ಭಯೋತ್ಪಾದಕರು ಕೊಲ್ಲಲ್ಪಟ್ಟರು ಎಂದು ಇಸ್ರೇಲ್ ಹೇಳಿಕೊಂಡಿದೆ.

ಇದನ್ನೂ ಓದಿ: Road Mishap: ಕಂಟೈನರ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್;‌ 12 ಮಂದಿ ದಾರುಣ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next