Advertisement

ರಾಹುಲ್ ಗಾಂಧಿಗೆ ಸವಾಲು ಹಾಕಿದ ಅಸಾದುದ್ದೀನ್ ಓವೈಸಿ

10:19 AM May 08, 2022 | Team Udayavani |

ಹೈದರಾಬಾದ್ : ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರಿಗೆ ಹೈದರಾಬಾದ್‌ನಿಂದ ಸ್ಪರ್ಧಿಸುವಂತೆ ಸವಾಲು ಹಾಕಿ, ನೀವು ವಯನಾಡಿನಲ್ಲೂ ಸೋಲುತ್ತೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

Advertisement

ಟಿಆರ್‌ಎಸ್, ಬಿಜೆಪಿ ಮತ್ತು ಓವೈಸಿಗೆ ಸವಾಲು ಹಾಕಲು ತೆಲಂಗಾಣಕ್ಕೆ ಬಂದಿದ್ದೇನೆ ಎಂಬ ರಾಹುಲ್ ಗಾಂಧಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಓವೈಸಿ, “ನೀವು ಈಗ ವಯನಾಡಿನಿಂದಲೂ ಸೋಲುತ್ತೀರಿ ಎಂದು ನಾನು ಹೇಳುತ್ತಿದ್ದೇನೆ. ಬನ್ನಿ, ಹೈದರಾಬಾದ್‌ನಿಂದ ಸ್ಪರ್ಧಿಸಿ. ನಿಮ್ಮ ಅದೃಷ್ಟವನ್ನು ಪ್ರಯತ್ನಿಸಿ. ನೀವು ಮೇದಕ್‌ನಿಂದಲೂ ಸ್ಪರ್ಧಿಸಬಹುದು ಎಂದಿದ್ದಾರೆ.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಶುಕ್ರವಾರ ರಾಹುಲ್ ಗಾಂಧಿ ರೈತ ಸಂಘರ್ಷ ಸಭೆಯ ಮೂಲಕ ಪಕ್ಷದ ಚುನಾವಣಾ ರಣಕಹಳೆ ಮೊಳಗಿಸಿದರು. ರಾಹುಲ್ ಗಾಂಧಿ ಮೇ 6-7 ರಂದು ಎರಡು ದಿನಗಳ ತೆಲಂಗಾಣ ಪ್ರವಾಸದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next