Advertisement

ಚೀನಾ ದಾಳಿ ಹೀಗೆ ಮುಂದುವರೆದರೆ ಮುಂದೊಂದು ದಿನ ಸಿಯಾಚಿನ್ ಕೂಡ ಕೈ ತಪ್ಪಲಿದೆ: ಓವೈಸಿ ಕಿಡಿ

04:36 PM Dec 13, 2022 | Team Udayavani |

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಚೀನಾ ನಿಧಾನವಾಗಿ ದಾಳಿ ನಡೆಸುತ್ತಿದೆ ಎಂದ ಅವರು, ಇದೇ ರೀತಿ ಮುಂದುವರಿದರೆ ಮುಂದೊಂದು ದಿನ ಸಿಯಾಚಿನ್ ಕೂಡ ಭಾರತದ ಕೈ ತಪ್ಪಲಿದೆ ಎಂದು ಕಿಡಿಕಾರಿದ್ದಾರೆ.

Advertisement

ಡೋಕ್ಲಾಮ್, ಡೆಪ್ಸಾಂಗ್, ಗಾಲ್ವಾನ್ ಮತ್ತು ಡೆಮ್‌ಚೋಕ್‌ನ ಅನುಭವಗಳಿಂದ ಚೀನಾ ಹೆಚ್ಚು ಕಲಿತಿದ್ದು, ಪ್ರಧಾನಿ ಮೋದಿ ಈ ಆಕ್ರಮಣವನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು. ಈ ಕಾರಣಕ್ಕಾಗಿ ಚೀನಾ ಸದ್ದುಗದ್ದಲವಿಲ್ಲದೆ ನಿಧಾನವಾಗಿ ದಾಳಿ ನಡೆಸುತ್ತಲೇ ಬಂದಿದೆ ಎಂದರು.

ಟ್ವೀಟ್‌ ಮೂಲಕ ಸರ್ಕಾರವನ್ನು ಪ್ರಶ್ನಿಸಿರುವ ಅವರು, ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೈನಿಕರು ತಮ್ಮ ಸೇನಾ ನೆಲೆಯನ್ನು ನಿರ್ಮಿಸಲು ಏಕೆ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ. “ಚೀನಾ 2017 ರಲ್ಲಿ ಡೋಕ್ಲಾಮ್‌ನಲ್ಲಿ ಮತ್ತು 2020 ರ ಏಪ್ರಿಲ್‌ನಲ್ಲಿ ಲಡಾಖ್‌ನಲ್ಲಿ ಅದೇ ರೀತಿ ಮಾಡಿತು. ನಾವೇಕೆ ಇನ್ನೂ ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಂಡಿಲ್ಲ?” ಘರ್ಷಣೆಯ ಬಗ್ಗೆ ಸಂಸತ್ತಿನಲ್ಲಿ ಸಂಪೂರ್ಣ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬೆಚ್ಚಿ ಬೀಳಿಸುವ ಘಟನೆ: ಚಲಿಸುತ್ತಿದ್ದ ಬಸ್ಸಿನ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next