Advertisement

ಆಶಾ ಕಾರ್ಯಕರ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

05:28 AM Jul 03, 2020 | Lakshmi GovindaRaj |

ಬೆಂಗಳೂರು: ಆಶಾ ಕಾರ್ಯಕರ್ತೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಪಾಪಯ್ಯ ಬಡಾವಣೆ ನಿವಾಸಿ ಸವಿತಾ (32) ಮೃತರು. ಸವಿತಾ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೆಲ ವರ್ಷಗಳ ಹಿಂದೆ  ಪತಿಯನ್ನು ತೊರೆದಿದ್ದರು. ಮಾರುತಿ ನಗರದಲ್ಲಿರುವ ಸಹೋದರರ ಮನೆಗೆ ಬಂದು ನೆಲೆಸಿದ್ದು, ಕೋವಿಡ್‌ 19 ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.

Advertisement

ಬುಧವಾರ ಸಹೋದರರಿಬ್ಬರು ಕೆಲಸಕ್ಕೆ ಹೋಗಿದ್ದು, ಈ ವೇಳೆ ಮನೆಯಲ್ಲಿ ಒಬ್ಬರೇ  ಇದ್ದರು.  ಮಲಗುವ ಕೊಠಡಿಯಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಸಹೋದರರಿಬ್ಬರು ಮನೆಗೆ ವಾಪಸ್‌ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ  ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next