Advertisement

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

01:50 PM Jul 12, 2020 | Suhan S |

ಶಹಾಪುರ: ಕೋವಿಡ್ ಲಾಕ್‌ಡೌನ್‌ ಸಮಯದಲ್ಲಿ ಇಲ್ಲಿವರೆಗೂ ನಿರಂತರ ಸೇವೆಯಲ್ಲಿ ತೊಡಗಿಸಿಕೊಂಡ ಆಶಾ ಕಾರ್ಯಕರ್ತೆಯರ 10 ಬೇಡಿಕೆಗಳನ್ನು ಸರಕಾರ ಈಡೇರಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರು ತಾಲೂಕು ಶುಕ್ರವಾರ ಪ್ರತಿಭಟನೆ ನಡೆಸಿ ವೈದ್ಯಾಧಿಕಾರಿ ರಮೇಶ ಗುತ್ತೇದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Advertisement

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸಬೇಕು. ಕೋವಿಡ್ ವಿರುದ್ಧ ನಾವೆಲ್ಲ ಜೀವದ ಹಂಗು ತೊರೆದು ಕುಟುಂಬದ ರಕ್ಷಣೆ ಮರೆತು ಹಗಲಿರುಳು ಶ್ರಮಿಸುತ್ತಿದ್ದೇವೆ. ಸರ್ಕಾರ ಇಂತಹ ಸಮಯದಲ್ಲಿ ನಮಗೂ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳಿಗೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಧರಣಿ ಸತ್ಯಾಗ್ರಹ ನಿರಂತರ ನಡೆಯಲಿದೆ ಎಂದು ಧರಣಿ ನಿರತರ ಆಶಾ ಕಾರ್ಯಕರ್ತೆಯರು ಎಚ್ಚರಿಸಿದರು. ಧರಣಿಯಲ್ಲಿ ಜಿಲ್ಲಾ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ದೇವಕ್ಕಿ ಎಸ್‌., ಪ್ರಮುಖರಾದ ದ್ಯಾವಮ್ಮ, ಜ್ಯೋತಿ, ಅಮೃತಾ, ನಿಂಗಮ್ಮ, ದೇವಮ್ಮ, ಕಮಲಾಕ್ಷಿ, ಸುನೀತಾ, ನಾಗಮ್ಮ, ಹಣಮಂತಿ, ನಾಗವೇಣಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next