Advertisement

ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ ಸೂಚನೆ

09:09 AM Apr 03, 2020 | keerthan |

ಬೆಂಗಳೂರು: ಆರೋಗ್ಯ ಸಮೀಕ್ಷೆ ನಡೆಸಲು ಆಶಾ ಕಾರ್ಯಕರ್ತೆಯೋರ್ವರು ತೆರಳಿದ್ದ ಸಮಯದಲ್ಲಿ ಅವರ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದರು.

Advertisement

ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಹೆಗಡೆ ನಗರದ ಕೃಷ್ಣ ವೇಣಿ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಸಾಂತ್ವಾನ ಹೇಳಿದರು. ನಂತರ ಮಾತನಾಡಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದರು.

ಸಾದಿಕ್ ಪಾಳ್ಯದಲ್ಲಿ ಆರೋಗ್ಯ ಸಮೀಕ್ಷೆ ನಡೆಸಲು ತೆರಳಿದ್ದ ಆಶಾ ಕಾರ್ಯಕರ್ತೆಗೆ ಹಲ್ಲೆಗೆ ಯತ್ನಿಸಿ ಅವರ ಮೊಬೈಲ್ ಕಿತ್ತುಕೊಳ್ಳಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next