Advertisement
ಅದೇ ರೀತಿ ಬಳ್ಳಾರಿಯಿಂದ ಮಾಜಿ ಸಂಸದರಾದ ಶಾಂತಾ ಅಥವಾ ಎನ್.ವೈ. ಹನುಮಂತಪ್ಪ ಹೆಸರು ಪರಿಶೀಲನೆಯಲ್ಲಿದೆ. ಶಿವಮೊಗ್ಗ ಕ್ಷೇತ್ರದಿಂದ ತಮ್ಮ ಪುತ್ರ ರಾಘವೇಂದ್ರ ಅಥವಾ ವಿಜಯೇಂದ್ರ ಅವರಲ್ಲಿ ಒಬ್ಬರನ್ನು ಕಣಕ್ಕಿಳಿಸಲು ಯಡಿಯೂರಪ್ಪ ಒಲವು ಹೊಂದಿದ್ದಾರೆಂದು ಹೇಳಲಾಗಿದೆ. ಮಂಡ್ಯ ಕ್ಷೇತ್ರದ ಸ್ಪರ್ಧೆ ವಿಚಾರದಲ್ಲಿ ಆರ್.ಅಶೋಕ್ ಅವರ ಜತೆಯೂ ಯಡಿಯೂರಪ್ಪ ಮಾತನಾಡಿದ್ದಾರೆ. ಪಕ್ಷ ಸೂಚಿಸಿದರೆ ಸ್ಪರ್ಧೆಗೆ ಸಿದ್ಧ ಇರಿ ಎಂದು ಹೇಳಿದ್ದಾರೆಂದು ತಿಳಿದು ಬಂದಿದೆ.
ಪಕ್ಷ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದಕ್ಕೆ ಬದ್ಧ. ಮೂರು ವರ್ಷ ಮಂಡ್ಯಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೆ ಪಕ್ಷ ದೊಡ್ಡದು. ಮಂಡ್ಯದಲ್ಲಿ ಯಾರು ಎದುರಾಳಿ ಎಂಬುದರ ಮೇಲೆ ಬಿಜೆಪಿಯ ಅಭ್ಯರ್ಥಿ ಯಾರಾಗಬೇಕು ಎಂಬುದು ನಿರ್ಧಾರವಾಗಲಿದೆ ಎಂದು ತಿಳಿಸಿದರು. ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ವಿಧಾನಪರಿಷತ್ಗೆ ಆಯ್ಕೆ ಮಾಡಿ ಪ್ರತಿಪಕ್ಷ ನಾಯಕಿ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಅರುಣ್ ಶಹಾಪುರ ಅವರು ಮಂಗಳವಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
Related Articles
ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದರು. ಭೇಟಿಯ ನಂತರ ಮಾತನಾಡಿದ ಅರುಣ್ ಶಹಾಪುರ, “ವಿಧಾನಪರಿಷತ್ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ. ಪಕ್ಷ ಮತ್ತು ಹಿರಿಯರು ಯಾವ ನಿರ್ಣಯ ಕೈಗೊಳ್ಳುತ್ತಾರೋ ಅದಕ್ಕೆ ಬದ್ಧ’ ಎಂದರು.
Advertisement
ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, “ಬೆಂಗಳೂರಿಗೆ ಬಂದಾಗ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡುವುದು ನನ್ನ ಸಂಪ್ರದಾಯ. ಹಾಗೇ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ. ಪರಿಷತ್ ವಿಪಕ್ಷ ಸ್ಥಾನ ನೀಡುವ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಬದಟಛಿ. ಹೊಣೆಗಾರಿಕೆ ನೀಡಿದರೆ ನಿಭಾಯಿಸಲು ಸಿದ್ಧ’ ಎಂದು ತಿಳಿಸಿದರು.