Advertisement

ಅಶೋಕ್ ಗೆಹ್ಲೋಟ್ ಗೆ ವಸುಂಧರಾ ರಾಜೇ ನಾಯಕಿಯೇ? ಮತ್ತೆ ತಿರುಗಿಬಿದ್ದ ಸಚಿನ್ ಪೈಲಟ್

02:43 PM May 09, 2023 | Team Udayavani |

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಾಯಕರು ಸೋನಿಯಾ ಗಾಂಧಿ ಅಲ್ಲ, ಬಿಜೆಪಿಯ ವಸುಂಧರಾ ರಾಜೇ ಎಂದು ತೋರುತ್ತಿದೆ ಎಂದು ಸಚಿನ್ ಪೈಲಟ್ ಇಂದು ಹೇಳಿದ್ದಾರೆ.

Advertisement

ಪಕ್ಷದ ಹಿರಿಯ ಅಶೋಕ್ ಗೆಹ್ಲೋಟ್ ಅವರ ಮೇಲೆ ಮತ್ತೆ ವಾಗ್ದಾಳಿ ನಡೆಸಿರುವ ಸಚಿನ್ ಪೈಲಟ್ ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷದ ಅವಕಾಶಗಳನ್ನು ಹಾಳುಮಾಡಲು ಬಯಸುವುದಿಲ್ಲ. ಆದ್ದರಿಂದ ಪಕ್ಷವನ್ನು ತೊರೆಯುವುದಿಲ್ಲ ಎಂದು ಹೇಳಿದರು. ಆದರೆ, ಭ್ರಷ್ಟಾಚಾರವನ್ನು ಬಯಲು ಮಾಡಲು ಅಜ್ಮೀರ್‌ ನಿಂದ ಜೈಪುರದವರೆಗೆ “ಜನಸಂಘರ್ಷ್ ಯಾತ್ರೆ”ಯನ್ನು ನಡೆಸುವುದಾಗಿ ಘೋಷಿಸಿದರು.

2020 ರಲ್ಲಿ ಸಚಿನ್ ಪೈಲಟ್ ಕೆಲವು ಶಾಸಕರೊಂದಿಗೆ ದಂಗೆ ಎದ್ದಾಗ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು ಎಂದು ಅಶೋಕ್ ಗೆಹ್ಲೋಟ್ ಅವರ ಹೇಳಿಕೆಯ ಬಳಿಕ ಸಚಿನ್ ಪೈಲಟ್ ತಿರುಗೇಟು ನೀಡಿದ್ದಾರೆ.

ಧೋಲ್ಪುರದಲ್ಲಿ ಮುಖ್ಯಮಂತ್ರಿಯವರ ಭಾಷಣವನ್ನು ಕೇಳಿದ ನಂತರ, ಅವರ ನಾಯಕಿ ಸೋನಿಯಾ ಗಾಂಧಿ ಅಲ್ಲ, ಆದರೆ ಅವರ ನಾಯಕಿ ವಸುಂಧರಾ ರಾಜೇ ಎಂದು ನಾನು ಭಾವಿಸುತ್ತೇನೆ ಎಂದು ಸಚಿನ್ ಪೈಲಟ್ ಸುದ್ದಿಗಾರರಿಗೆ ತಿಳಿಸಿದರು.

“ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸಿದೆ ಎಂದು ಅವರು (ಗೆಹ್ಲೋಟ್) ಆರೋಪಿಸಿದ್ದಾರೆ. ನಂತರ ಅವರು ಬಿಜೆಪಿ ನಾಯಕರೊಬ್ಬರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು ಎಂದು ಹೇಳುತ್ತಾರೆ. ಈ ಎರಡು ವಿರುದ್ಧ ಹೇಳಿಕೆಯನ್ನು ಅವರೇ ವಿವರಿಸಬೇಕು” ಎಂದಿದ್ದಾರೆ.

Advertisement

ಭಾನುವಾರ ನಡೆದ ರ್ಯಾಲಿಯಲ್ಲಿ ಅಶೋಕ್ ಗೆಹ್ಲೋಟ್ ಅವರು ವಸುಂಧರಾ ರಾಜೆ ಮತ್ತು ಇತರ ಇಬ್ಬರು ಬಿಜೆಪಿ ನಾಯಕರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು, ಬಿಜೆಪಿಗೆ ಸೇರಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಣವನ್ನು ನೀಡಲಾಗಿದೆ ಎಂದು ಹೇಳಿದ್ದರು. ಬಂಡಾಯವೆದ್ದಿರುವ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ಗೆಹ್ಲೋಟ್, ಅವರು ಹಣವನ್ನು ಹಿಂತಿರುಗಿಸಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next