Advertisement

ಅಶೋಕ ಚೂಂತಾರು ಅವರಿಗೆ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ 

04:22 PM Jun 23, 2017 | Team Udayavani |

ಸುಳ್ಯ: ರಾಜ್ಯ ಸರಕಾರದ ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಜರಗಿದ ಸಮಾರಂಭದಲ್ಲಿ ಅಮರಪಟ್ನೂರು ಗ್ರಾಮದ ಸುಳ್ಯ ಬ್ಲಾಕ್‌ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಗತಿ ಪರ ಕೃಷಿಕ ಅಶೋಕ ಚೂಂತಾರು ಅವರಿಗೆ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

Advertisement

ಪ್ರಶಸ್ತಿಯು 1 ಲಕ್ಷ ರೂ. ನಗದು ಮತ್ತು ಫ‌ಲಕ, ಪತ್ರಗಳನ್ನು ಒಳ ಗೊಂಡಿದೆ. ಅಮರಪಟ್ನೂರು ಗ್ರಾಮದಲ್ಲಿ ಮತ್ತು ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಗ್ರ ಕೃಷಿ ಪದ್ಧತಿಯಲ್ಲಿ, ಕೃಷಿ ಚಟುವಟಿಕೆಯಲ್ಲಿ ಯಶಸ್ಸನ್ನು ಕಂಡಿರುತ್ತಾರೆ.

ಬೆಂಗಳೂರಿನ ಗಾಂಧಿ ಕೃಷಿ ಜ್ಞಾನ ಕೇಂದ್ರದ 16 ಉನ್ನತ ಅಧಿಕಾರಿಗಳ ತಂಡ ಕ್ಷೇತ್ರ ಭೇಟಿ ಮಾಡಿ ಕೃಷಿ ಚಟುವಟಿ ಕೆಗಳನ್ನು ಪರಿಶೀಲಿಸಿ ನೀಡಿದ ಅಂಕಗಳ ಆಧಾರದಲ್ಲಿ ಪ್ರಶಸ್ತಿಗೆ ಚೂಂತಾರು ಅವರನ್ನು ಆಯ್ಕೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next