Advertisement

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ: ಡಿ.ಕೆ.ಶಿ ತಿರುಗೇಟು

11:32 AM Jun 27, 2023 | Team Udayavani |

ಬೆಂಗಳೂರು: ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Advertisement

ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಕೆಂಪೇಗೌಡರು ಕಟ್ಟಿದ ಪ್ರದೇಶ. ತಮಿಳುನಾಡಿನ ಗಡಿ ಭಾಗದಲ್ಲಿ ಸಂಗಮದ ಬಳಿ ಕೆಂಪೇಗೌಡರ ಕೋಟೆ ಇದೆ. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಆ ಕೋಟೆ ಸಮೀಪ ನಿಜಲಿಂಗಪ್ಪ ಅವರ ಮನೆ ಪಕ್ಕ ವೀರೇಂದ್ರ ಪಾಟೀಲ್ ಅವರ ಮನೆ ಇದೆ. ಅದರ ಪಕ್ಕದಲ್ಲಿ ನನ್ನ ತಂದೆ ದೊಡ್ಡಹಾಲಹಳ್ಳಿ ಕೆಂಪೇಗೌಡರ ಮನೆ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ. ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ ಸಂಬಂಧ ಎಂದರು.

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ ನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ:Free Electricity Scheme: ಗೃಹಜ್ಯೋತಿ ಯೋಜನೆಗೆ 9 ದಿನದಲ್ಲಿ 61,70,044 ಗ್ರಾಹಕರು ನೋಂದಣಿ

ಇಂದು ನಾವು ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಮೂವರು ಮಹನೀಯರನ್ನು ಸ್ಮರಿಸಬೇಕು ಅದು ಕೆಂಪೇಗೌಡ, ಕೆಂಗಲ್ ಹನುಮಂತಯ್ಯ ಹಾಗೂ ಎಸ್.ಎಂ ಕೃಷ್ಣ. ಇವರು ಕಟ್ಟಿರುವ ಬೆಂಗಳೂರನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು. ಕೆಂಪೇಗೌಡರ ಸ್ಥಂಭ ಹೇಗೆ ಸ್ಮಾರಕವಾಗಿದೆಯೋ ಅದೇ ರೀತಿ ನಾವು ನಮ್ಮ ಕೆಲಸಗಳ ಮೂಲಕ ಸಾಕ್ಷಿಗುಡ್ಡೆ ನಿರ್ಮಿಸಬೇಕು ಎಂದರು.

Advertisement

ಬೆಂಗಳೂರು ಕೆಲವು ಭಾಗಗಳು ಮಾತ್ರ ಯೋಜಿತ ನಗರವಾಗಿದ್ದು, ಉಳಿದ ಭಾಗಗಳು ಯೋಜನೆ ರಹಿತವಾಗಿ ಬೆಳೆದುಕೊಂಡಿದೆ. ಇಲ್ಲಿನ ಹವಾಮಾನದಲ್ಲಿ ಬದುಕಿದವರು ಇದನ್ನು ಬಿಟ್ಟು ಹೋಗುವುದಿಲ್ಲ.  ಈ ಬೆಂಗಳೂರು ನೆಲದಲ್ಲಿ ಕೆಂಪೇಗೌಡ, ಕೆಂಗಲ್ ಹನುಮಂತಯ್ಯ, ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮಿ ಹುಟ್ಟಿದ್ದಾರೆ. ಇದು ಈ ನೆಲದ ವೈಶಿಷ್ಟ್ಯತೆ. ಇದನ್ನು ಧರ್ಮವಾಗಿ, ಅಭಿವೃದ್ಧಿ ಹಾಗೂ ಪ್ರಗತಿಯಾಗಿದೆ ಉಳಿಸಿಕೊಂಡು ಹೋಗಬೇಕು. ಹೀಗಾಗಿ ಈ ಬೆಂಗಳೂರು ಅಭಿವೃದ್ಧಿ ಮಾಡಬೇಕು. ನಾನು ಬಹಳ ಉತ್ಸುಕತೆಯಿಂದ ಬೆಂಗಳೂರು ನಗರದ ಜವಾಬ್ದಾರಿ ಹೊತ್ತುಕೊಂಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next