Advertisement

ನರೇಂದ್ರ ಮೋದಿ ಅಲೆ ಸದಾ ಇದ್ದೆ ಇರುತ್ತದೆ: ಡಾ.ಅಶ್ವಥ್ ನಾರಾಯಣ್

03:44 PM Oct 04, 2021 | Team Udayavani |

ಮೈಸೂರು: ಹಾಸನಕ್ಕೆ ಹೋಗಿ ಕೇಳಿದರೂ ಶೇ.65% ಜನ‌ ಮೋದಿ ಪ್ರಧಾನಿ ಆಗಬೇಕು ಎನ್ನತ್ತಾರೆ. ಕನಕಪುರಕ್ಕೂ ಹೋಗಿ ಕೇಳಿದರೂ ಮೋದಿ ಹೆಸರು ಹೇಳುತ್ತಾರೆ. ಅಲ್ಲೆಲ್ಲೂ ಸ್ಥಳೀಯ ನಾಯಕರ ಹೆಸರು ಹೇಳುವುದಿಲ್ಲ‌. ನರೇಂದ್ರ ಮೋದಿ ಅಲೆ ಸದಾ ಇದ್ದೆ ಇರುತ್ತದೆ ಎಂದು ಡಾ.ಅಶ್ವಥ್‌ನಾರಾಯಣ್ ಹೇಳಿದರು.

Advertisement

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ‌. ಯಾವುದೇ ಕಾರಣಕ್ಕೂ ಅಧಿಕಾರ ಮಾಡುವುದಿಲ್ಲ‌. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲೇ ಒಡೆದು ನೂರು ಭಾಗವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕತ್ವಕ್ಕೆ ಕಿತ್ತಾಟ ಶುರುವಾಗಿದೆ. ಯಾವ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ‌, ಇದನ್ನು ನಾನು ಬರೆದುಕೊಡುತ್ತೇನೆ. ಅಲ್ಲದೆ ನಮ್ಮ ಶಾಸಕರು ಯಾರು ಕಾಂಗ್ರೆಸ್‌ ಗೆ ಹೋಗುವುದಿಲ್ಲ ಎಂದರು.

ಇದನ್ನೂ ಓದಿ:ಶ್ರೀರಂಗಪಟ್ಟಣ: ರೈತರ ಹೈಡ್ರಾಮ, ಸಚಿವ ಅಶೋಕ್ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ

ಬೈ ಎಲೆಕ್ಷನ್ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರಗೆ ಕೊಕ್ ಕುರಿತು ಮಾತನಾಡಿದ ಅವರು, ಯಾರನ್ನು ಕೈ ಬಿಟ್ಟಿದು ಎಂಬುದು ಮುಖ್ಯವಲ್ಲ. ಬಿಜೆಪಿಯಲ್ಲಿ ಎಲ್ಲರೂ ಪ್ರಚಾರದಲ್ಲಿ ಭಾಗವಹಿಸಬಹುದು. ವಿಜಯೇಂದ್ರರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next