Advertisement

ಪ್ರತಿಭಟನೆಯ ನಡುವೆಯೂ ಮಾನವೀಯತೆ ಮೆರೆದ ಆಸೀಫ್ ಆಪದ್ಭಾಂದವ

07:05 PM Feb 16, 2022 | Team Udayavani |

ಹಳೆಯಂಗಡಿ : ಸುರತ್ಕಲ್‌ನ ಎನ್‌ಐಟಿಕೆ ಬಳಿಯ ಟೋಲ್ ಕೇಂದ್ರವನ್ನು ರದ್ದುಗೊಳಿಸಬೇಕು ಎಂದು ಕಳೆದ 10 ದಿನಗಳಿಂದ ಹಗಲು ರಾತ್ರಿ ಪ್ರತಿಭಟನೆಯನ್ನು ನಡೆಸುತ್ತಿರುವ ಆಸೀಪ್ ಆಪದ್ಭಾಂದವ ಪ್ರತಿಭಟನೆಯ ನಡುವೆಯೂ ಮಾನವೀಯತೆ ಮೆರೆದಿದ್ದಾರೆ.

Advertisement

ಅವರು ಬುಧವಾರ ಪ್ರತಿಭಟನೆಯ ನಡುವೆಯೂ ಪಾವಂಜೆ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸುಚೇಂದ್ರಕುಮಾರ್ ಅವರ ಶವವನ್ನು ಮೇಲೆತ್ತಲು ಆಗಮಿಸಿ ನದಿಗೆ ಹಾರಿ ದೋಣಿಯ ಸಹಾಯದಿಂದ ಶವವನ್ನು ಮೇಲೆತ್ತಿದ್ದಾರೆ.

ನಂತರ ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನೆಯನ್ನು ಮುಂದುವರಿಸಿದ ಘಟನೆ ನಡೆದಿದೆ. ಆಸೀಪ್ ಅವರ ಮಾನವೀಯತೆ ಸ್ಥಳೀಯವಾಗಿ ಪ್ರಶಂಸೆಗೆ ಪಾತ್ರವಾಗಿದೆ.

ಹಳೆಯಂಗಡಿ ಗ್ರಾಮ ಪಂಚಾಯತ್‌ನ ಸದಸ್ಯ ಸುಕೇಶ್ ಪಾವಂಜೆ ದೋಣಿಯ ಮೂಲಕ ಶವ ಮೇಲೆತ್ತಲು ಸಹಕಾರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next