Advertisement

ತಾಕತ್ತಿದ್ರೆ ಬಿಜೆಪಿ ಶಾಸಕರ ಹೆಸರು ಹೇಳಿ: ಶ್ರೀರಾಮುಲು

11:21 PM May 15, 2019 | Lakshmi GovindaRaj |

ನಾಯಕನಹಟ್ಟಿ: ಸಚಿವ ಡಿ.ಕೆ.ಶಿವಕುಮಾರ್‌ಗೆ ತಾಕತ್ತಿದ್ದರೆ ಕಾಂಗ್ರೆಸ್‌ ಸಂಪರ್ಕದಲ್ಲಿರುವ ಬಿಜೆಪಿಯ ಯಾರಾದರೂ ಒಬ್ಬ ಶಾಸಕರ ಹೆಸರು ಹೇಳಲಿ ನೋಡೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಸವಾಲೆಸೆದಿದ್ದಾರೆ.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ಹಲವಾರು ಶಾಸಕರು ತಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿರುವುದು ಕಿಡಿಗೇಡಿತನದ ಹೇಳಿಕೆ. ಅವರಿಗೆ ತಾಕತ್ತಿದ್ದರೆ ಬಿಜೆಪಿಯ ಒಬ್ಬ ಶಾಸಕನ ಹೆಸರನ್ನು ಬಹಿರಂಗ ಪಡಿಸಲಿ. ನಾವು ಬಿಜೆಪಿ ಸಂಪರ್ಕದಲ್ಲಿರುವ ಶಾಸಕರ ಪಟ್ಟಿ ನೀಡಲು ಸಿದ್ಧರಿದ್ದೇವೆ ಎಂದು ಘೋಷಿಸಿದರು.

ಸರ್ಕಾರ ರಚನೆ ಖಚಿತ: ಉಪ ಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾ ಧಿಸಲಿದೆ. ಇದರ ಜತೆಗೆ ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲಿದ್ದಾರೆ. ರಮೇಶ್‌ ಜಾರಕಿಹೊಳಿ ಜತೆಗೆ ಏಳೆಂಟು ಶಾಸಕರು ಗುರುತಿಸಿಕೊಂಡಿದ್ದಾರೆ. ಇವರೆಲ್ಲ ನಮ್ಮ ಸಂಪರ್ಕದಲ್ಲಿದ್ದಾರೆ. ಆದ್ದರಿಂದ ಸರ್ಕಾರ ರಚನೆಗೆ ಅಗತ್ಯವಾದ ಸಂಖ್ಯಾಬಲ ದೊರೆಯುತ್ತದೆ. ಹೀಗಾಗಿ, ಸರ್ಕಾರ ರಚನೆ ಮಾಡುವ ಆತ್ಮವಿಶ್ವಾಸವಿದೆ. ಇದಕ್ಕಾಗಿ ಪಕ್ಷ ಸಿದ್ಧತೆ ಮಾಡಿಕೊಂಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next