Advertisement

ಪ್ರಶ್ನೆ ಕೇಳಿದರೆ ಗುಂಡಿಕ್ಕಿ ಕೊಲ್ತಾರೆ: ನಿಜಗುಣ ಶ್ರೀ

11:41 PM Jun 29, 2019 | Team Udayavani |

ಗೋಕಾಕ: ದೇಶದಲ್ಲಿ ಪ್ರಶ್ನೆ ಕೇಳಿದರೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತಿದೆ. ಪ್ರಶ್ನೆ ಕೇಳುವುದೇ ದೊಡ್ಡ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಮುಂಡರಗಿ-ಬೈಲೂರು ತೋಂಟದಾರ್ಯ ಮಠದ ಶ್ರೀ ನಿಜಗುಣ ತೋಂಟದಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ನಡೆದ ವೈಚಾರಿಕ ಗೋಷ್ಠಿಯಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ಪ್ರಶ್ನೆ ಕೇಳುವುದು ಆರಂಭವಾಯಿತು.

Advertisement

ಆದರೆ, 21ನೇ ಶತಮಾನದಲ್ಲಿ ನಮ್ಮ ನಾಲಿಗೆ ಸತ್ತು ಹೋಗಿವೆ. ಪ್ರಶ್ನೆ ಮಾಡಿದರೆ ನಮ್ಮನ್ನು ಚಕ್ರವ್ಯೂಹದಲ್ಲಿ ಸಿಲುಕಿಸಿ ಮಾಧ್ಯಮಗಳ ಮೂಲಕ ಮನೆಯಲ್ಲಿ ಕೂರಿಸಲಾಗುತ್ತಿದೆ. ವೈಚಾರಿಕ ಮಾತುಗಳನ್ನಾಡಿದರೆ ಧರ್ಮ ವಿರೋಧಿ, ರಾಷ್ಟ್ರ ವಿರೋಧಿ, ದೈವ ವಿರೋಧಿ, ಸಂಪ್ರದಾಯ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next