Advertisement

ಕಾಲಾವಕಾಶ ಕೇಳಿದ್ದು ಸರಿಯಲ್ಲ

06:35 AM Jan 08, 2018 | |

ಧಾರವಾಡ: ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆಗೆ ಸಂಬಂಧಿ ಸಿ ದಂತೆ ಸರ್ಕಾರ ರಚಿಸಿರುವ ತಜ್ಞರ ಸಮಿತಿ ವರದಿ ನೀಡಲು 6 ತಿಂಗಳು ಕಾಲಾವಕಾಶ ಕೇಳುವುದಕ್ಕೆ ಅಸಮಾಧಾನವಿದೆ ಎಂದು ಸಚಿವ ವಿನಯ್‌ ಕುಲಕರ್ಣಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಸಮಿತಿ ಒಂದು ತಿಂಗಳಲ್ಲಿ ವರದಿ ಸಲ್ಲಿಸಬೇಕಿತ್ತು. ಆದರೆ ಇದೀಗ ಆರು ತಿಂಗಳು ಕಾಲಾವಕಾಶ ಕೇಳಲು ಮುಂದಾಗಿರುವು ದು ಅಸಮಾಧಾನ ತಂದಿದೆ. ಈ ಕುರಿತು ಸೋಮವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತನಾಡುತ್ತೇವೆ. ಈ ಹೋರಾಟ ಕೇವಲ ಚುನಾವಣೆಗೆ ಎಂದು ಹೇಳಿರುವ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ ತಮ್ಮ ಪರವಾಗಿಲ್ಲ. ಹೀಗಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ವರದಿ ನೀಡಲು ತಜ್ಞರ ಸಮಿತಿ ಆರು ತಿಂಗಳ ಕಾಲಾವಕಾಶ ಕೋರಿರುವುದು ನನ್ನ ಗಮನಕ್ಕೆ ಬಂದಿಲ್ಲ. ಬೆಂಗಳೂರಿಗೆ ತೆರಳಿದ ಬಳಿಕ ತಜ್ಞರ ಸಮಿತಿ ಪ್ರಮುಖರೊಂದಿಗೆ ಈ
ಕುರಿತು ಚರ್ಚಿಸುತ್ತೇನೆ.

– ಸಿದ್ದರಾಮಯ್ಯ, ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next