Advertisement

ಧಾರ್ಮಿಕ ಬೋಧನೆ : ಅಸ್ಸಾಂ ನಲ್ಲಿ 17 ಬಾಂಗ್ಲಾ ಪ್ರಜೆಗಳ ಬಂಧನ

07:11 PM Sep 17, 2022 | Team Udayavani |

ದಿಸ್ಪುರ್ : ಪ್ರವಾಸಿ ವೀಸಾದಲ್ಲಿ ಧಾರ್ಮಿಕ ಬೋಧನೆ ಮತ್ತು ಧಾರ್ಮಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ 17 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.

Advertisement

ವೀಸಾ ಷರತ್ತುಗಳ ಉಲ್ಲಂಘನೆ ಮತ್ತು ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ನವೀನ್ ಸಿಂಗ್ ಹೇಳಿದ್ದಾರೆ.

ಅಖ್ತರ್ ಹುಸೇನ್ ತನಿಖೆ ಚುರುಕು

ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಕರ್ನಾಟಕದಲ್ಲಿ ಜುಲೈನಲ್ಲಿ ಬಂಧಿಸಲಾದ ಭಯೋತ್ಪಾದಕ ಅಖ್ತರ್ ಹುಸೇನ್ ಲಷ್ಕರ್‌ನನ್ನು ಎನ್‌ಐಎ ತನಿಖೆ ನಡೆಸುತ್ತಿದೆ. ಎನ್‌ಐಎ ದಾಖಲಿಸಿರುವ ಎಫ್‌ಐಆರ್‌ನಲ್ಲಿ ದೊಡ್ಡ ಮಾಹಿತಿ ಹೊರಬಿದ್ದಿದೆ.

ಅಸ್ಸಾಂ ನಿವಾಸಿ ಅಖ್ತರ್ ಹುಸೇನ್ ಲಷ್ಕರ್ ಯುವಕರನ್ನು ಕಾಶ್ಮೀರ ಮತ್ತು ಅಫ್ಘಾನಿಸ್ತಾನದ ಖೊರಾಸನ್ ಪ್ರಾಂತ್ಯಕ್ಕೆ ಭಯೋತ್ಪಾದಕ ತರಬೇತಿಗಾಗಿ ಕಳುಹಿಸಲು ಸಂಚು ರೂಪಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಇದರೊಂದಿಗೆ ಯುವಕರನ್ನು ಧರ್ಮದ ಹೆಸರಿನಲ್ಲಿ ಯುದ್ಧ ಮಾಡುವಂತೆ ಪ್ರೇರೇಪಿಸಿದ್ದ ಎಂದು ತಿಳಿದು ಬಂದಿದೆ.

Advertisement

ಎನ್‌ಐಎ ಎಫ್‌ಐಆರ್‌ನಲ್ಲಿ ಅಖ್ತರ್ ಹುಸೇನ್ ಎಲ್ಇಟಿ ಬೆಂಗಳೂರಿನಿಂದ ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದ ಎಂದು ಉಲ್ಲೇಖಿಸಲಾಗಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಜತೆಗೂ ಸಂಪರ್ಕ ಹೊಂದಿದ್ದ ಎಂದು ಖಚಿತ ಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next