Advertisement

ಚಿಕ್ಕಮಗಳೂರಿನಲ್ಲಿ ಅಸ್ಸಾಂ ಮೂಲದ ಕಾರ್ಮಿಕರಿಂದ ಗೂಂಡಾಗಿರಿ

03:39 PM Feb 15, 2023 | Team Udayavani |

ಚಿಕ್ಕಮಗಳೂರು : ಮಲೆನಾಡಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಗೂಂಡಾಗಿರಿ ಮುಂದುವರೆದಿದ್ದು, 10ಕ್ಕೂ ಅಧಿಕ ಗ್ರಾಮಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

Advertisement

ಮಲ್ಲಂದೂರು ಸಮೀಪದ ಮಲಗಾರು ಗ್ರಾಮದಲ್ಲಿ ಕಾಫಿ ತೋಟದ ಕೆಲಸಕ್ಕೆ ಬಂದಿದ್ದ ನೂರಾರು ಅಸ್ಸಾಂ ಮೂಲದ ಕಾರ್ಮಿಕರು ಕೆಲಸದ ವಿಚಾರವಾಗಿ ತೋಟದ ರೈಟರ್ ಜೊತೆ ಗಲಾಟೆ ನಡೆಸಿದ ಬಳಿಕ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ.

ಗಲಾಟೆ ಬಿಡಿಸಲು ಹೋದ ಗ್ರಾಮಸ್ಥರನ್ನ ಅಸ್ಸಾಂ ಕಾರ್ಮಿಕರು ಅಟ್ಟಾಡಿಸಿಕೊಂಡು ಹೊಡೆಡಿದ್ದಾರೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡ 4 ಕ್ಕೂ ಹೆಚ್ಚು ಗ್ರಾಮಸ್ಥರು ಜಿಲ್ಲಾಸ್ಪತ್ರೆ ದಾಖಲಾಗಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರಿಂದ ಹಲ್ಲೆ ಎಂದು ಬಜರಂಗದಳ ಅಕ್ರೋಶ ಹೊರ ಹಾಕಿದೆ.

ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next