Advertisement

‘ಯೂತ್ ಗಲಾಟೆ’: ರಕ್ಷಾ ರಾಮಯ್ಯ ಬೆಂಬಲಿಗನ ಮೇಲೆ ನಲಪಾಡ್ ಹಲ್ಲೆ ಆರೋಪ!

12:26 PM Jan 20, 2022 | Team Udayavani |

ಬೆಂಗಳೂರು: ಯೂತ್ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರು ಬಳ್ಳಾರಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

Advertisement

ಸದ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿರುವ ರಕ್ಷಾ ರಾಮಯ್ಯ ಅಧಿಕಾರವು ಜನವರಿ 30 ರಂದು ಮುಕ್ತಾಯವಾಗಲಿದೆ. ನಂತರ ಅಧ್ಯಕ್ಷ ಸ್ಥಾನ ನಲಪಾಡ್ ಗೆಹಸ್ತಾಂತರವಾಗಬೇಕಿದೆ. ಹೀಗಾಗಿ ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲ್ ನ್ಲಿ ನಲಪಾಡ್ ಡಿನ್ನರ್ ಆಯೋಜಿಸಿದ್ದರು. ಸಭೆಯಲ್ಲಿ ಎಲ್ಲಾ ಜಿಲ್ಲೆಯ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಜಟಾಪಟಿ ನಡೆದಿದೆ.

ಇದನ್ನೂ ಓದಿ:ರಸ್ತೆ ಬದಿಯಲ್ಲಿ ನಿಲ್ಲಿಸಿದ ಜೆಸಿಬಿಯನ್ನೇ ಕದ್ದೊಯ್ದ ಖದೀಮರು : ಪೊಲೀಸರಿಂದ ಶೋಧಕಾರ್ಯ

ಬಳ್ಳಾರಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಅವರು ರಕ್ಷಾ ರಾಮಯ್ಯ ಬೆಂಬಲಿಗ ಎಂಬ ಕಾರಣಕ್ಕೆ ನಲಪಾಡ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನಾನು ಯೂತ್ ಕಾಂಗ್ರೆಸ್ ಅಧ್ಯಕ್ಷನಾಗುತ್ತಿದ್ದೇನೆ. ನೀನು ಬೇರೆಯವರಿಗೆ ಸಪೋರ್ಟ್ ಮಾಡುತ್ತೀಯ ಎಂದು ಆಕ್ರೋಶ ವ್ಯಕ್ತಪಡಿಸಿ, ನಲಪಾಡ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Advertisement

ನಲಪಾಡ್ ನಿರಾಕರಣೆ: ನಾನು ಎಲ್ಲರನ್ನೂ ಸ್ವತಃ ಸಭೆಗೆ ಕರೆದಿದ್ದು, ಯಾವುದೇ ಇಂತಹ ಘಟನೆ ನಡೆದಿಲ್ಲ. ಸುಮ್ಮನೆ ಇಂತಹ ಆರೋಪ ಮಾಡುತ್ತಿದ್ದಾರೆ. ನನ್ನ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸಲು ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಮೊಹಮ್ಮದ್ ನಲಪಾಡ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next