Advertisement

Belthangady ಜಾಗಕ್ಕೆ ಅಕ್ರಮ ಪ್ರವೇಶಿಸಿ ಹಲ್ಲೆ; ದೂರು ದಾಖಲು

09:43 PM Feb 10, 2024 | Team Udayavani |

ಬೆಳ್ತಂಗಡಿ: ಕಡಿರುದ್ಯಾವರದಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

ಹಲ್ಲೆಗೊಳಗಾಗಿರುವ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಬಾಜೆ ಗ್ರಾಮದ ನಿವಾಸಿ ಅನೀಶ್‌ ಹಾಗೂ ಸುಜಾತಾ ಅವರು ತಮ್ಮ ಜಾಗಕ್ಕೆ ನುಗ್ಗಿ ಜಮೀನಿನಲ್ಲಿದ್ದ ತುಂಡರಿಸಿದ ಮರಗಳಿಗೆ ಬೆಂಕಿ ಕೊಡಲು ಪ್ರಯತ್ನಿಸಿದ್ದು ಇದನ್ನು ಗಮನಿಸಿದ ಸಂತ್ರಸ್ತ ಮಹಿಳೆ ಪ್ರಶ್ನಿಸಿದಾಗ ಆರೋಪಿಗಳು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಶಿಬಾಜೆ ಗ್ರಾಮದ ನಿವಾಸಿ ಅನಿಶ್‌ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ತನ್ನ ಮೇಲೆ ಸಂತ್ರಸ್ತ ಮಹಿಳೆ ಹಾಗೂ ಆಕೆಯ ಪತಿ ಸೇರಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ ಎರಡೂ ಘಟನೆಗಳ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next