Advertisement

ಹಲ್ಲೆ ಕೇಸು: ಕೇಜ್ರಿ ಆಪ್ತನ ನ್ಯಾಯಾಂಗ ಬಂಧನ ವಿಸ್ತರಣೆ

01:06 AM Jun 23, 2024 | Team Udayavani |

ಹೊಸದಿಲ್ಲಿ: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ನ್ಯಾಯಾಂಗ ಬಂಧನವನ್ನು ಜು. 6ರ ವರೆಗೆ ವಿಸ್ತರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್‌ರನ್ನು ಮೇ 13ರಂದು ಬಂಧಿಸಲಾಗಿತ್ತು. ವೀಡಿ ಯೋ ಕಾನ್ಫರೆನ್ಸ್‌ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾ| ಗೌರವ್‌ ಗೊಯಲ್‌ ಬಿಭವ್‌ನ ನ್ಯಾಯಾಂಗ ಬಂಧನವನ್ನು ಜು. 6ರ ವರೆಗೆ ವಿಸ್ತರಿಸಿದ್ದಾರೆ. ಬಿಭವ್‌ ವಿರುದ್ಧ ಹಲವು ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next