Advertisement

Bangalore: ಲೈಂಗಿಕ ದೌರ್ಜನ್ಯ; ಯುವಕ ಬಂಧನ

02:10 PM Nov 24, 2023 | Team Udayavani |

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವತಿಯನ್ನು ನಡು ರಸ್ತೆಯಲ್ಲಿ ಅಡ್ಡಗಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

Advertisement

ಬಿನ್ನಿಪೇಟೆ ನಿವಾಸಿ ಹರೀಶ್‌(28) ಬಂಧಿತ.

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಎರಡು ತಿಂಗಳ ಹಿಂದೆಯಷ್ಟೇ ಕೆಲಸ ಬಿಟ್ಟಿದ್ದ. ಕನಕಪುರ ಮುಖ್ಯರಸ್ತೆ ಸಮೀಪದ ನಿವಾಸಿ ಯುವತಿ, ಕೂಡ್ಲು ಗೇಟ್‌ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ನ.6ರಂದು ರಾತ್ರಿ ಯುವತಿ ಕೆಲಸ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ಸೌತ್‌ ಎಂಡ್‌ ಸರ್ಕಲ್‌ ಮಾರ್ಗವಾಗಿ ಹೋಗುತ್ತಿದ್ದರು. ಆಗ ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಎದುರಿನ ರಸ್ತೆಯಲ್ಲಿ ದ್ವಿಚಕ್ರ ವಾಹನ ಅಡ್ಡಗಟ್ಟಿದ್ದ ಆರೋಪಿ, ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂದ ಆಕೆ ದೂರು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next