Advertisement

Uppinangady ವಿದ್ಯಾರ್ಥಿ ಮೇಲೆ ಹಲ್ಲೆ; ಪ್ರಕರಣ ದಾಖಲು

12:56 AM Oct 08, 2023 | Team Udayavani |

ಉಪ್ಪಿನಂಗಡಿ: ನೆಲ್ಯಾಡಿಯ ಮದರಸದ ವಿದ್ಯಾರ್ಥಿಯೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪದನ್ವಯ ನ್ಯಾಯಲಯದ ನಿರ್ದೇಶನದ ಮೇರೆಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಜಿ.ಎಚ್‌. ಮಹಮ್ಮದ್‌ ಸುಹೈಲ್‌ ಎಂಬ ವಿದ್ಯಾರ್ಥಿಯ ಮೇಲೆ ಉಮ್ಮರಬ್ಬ, ಉಸ್ಮಾನ್‌, ಅಬ್ದುಲ್ಲಾ, ರಫೀಕ್‌, ಶಕೀರ್‌, ಶಕಿಲ್‌ ಅವರು ನೆಲ್ಯಾಡಿ ಮಸೀದಿಯ ಮದರಸ ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಈ ಸಂಬಂಧ ಪುತ್ತೂರು ಹೆಚ್ಚುವರಿ ಸಿವಿಲ್‌ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿತ್ತು. ನ್ಯಾಯಾ ಲಯವು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವಂತೆ ಉಪ್ಪಿನಂಗಡಿ ಪೊಲೀಸರಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖ ಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next