Advertisement

Belthangadyದಂಪತಿಗೆ ಹಲ್ಲೆ:ಮಹೇಶ್‌ ಶೆಟ್ಟಿ ತಿಮರೋಡಿ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

01:19 AM Sep 05, 2023 | Team Udayavani |

ಬೆಳ್ತಂಗಡಿ: ಮಂಗಳೂರಿನಲ್ಲಿ ಯೂ ಟ್ಯೂಬ್‌ ಚಾನೆಲ್‌ವೊಂದರಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರ ವಿಚಾರವಾಗಿ ಸಂದರ್ಶನ ನೀಡಿ ಹಿಂದಿರುಗುತ್ತಿದ್ದ ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್‌ ನಾಯ್ಕ (50) ಅವರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ.

Advertisement

ಮಹೇಶ್‌ ಶೆಟ್ಟಿ ತಿಮರೋಡಿ, ಮೋಹನ್‌ ಶೆಟ್ಟಿ ಪಾಣಿಯಾಲು, ಮುಖೇಶ್‌ ಶೆಟ್ಟಿ, ಪ್ರಜ್ವಲ್‌ ಕೆ.ವಿ. ಗೌಡ, ನೀತು ಶೆಟ್ಟಿ ಪಾಣಿಯಾಲು, ಮತ್ತು ಪ್ರಮೋದ್‌ ಶೆಟ್ಟಿ ಪಾಣಿಯಾಲು ಸಹಿತ ಇತರರ ವಿರುದ್ಧ ದೂರು ದಾಖಲಿಸಲಾಗಿದೆ.

ಹಲ್ಲೆಗೊಳಗಾದ ಭಾಸ್ಕರ್‌ ನಾಯ್ಕ ಸೆ. 2ರಂದು ಮಂಗಳೂರಿನಲ್ಲಿ ಯೂಟ್ಯೂಬ್‌ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿ ವಾಪಸು ತನ್ನ ಮನೆಗೆ ಬರುತ್ತಿರುವಾಗ ಸಂಜೆ 5 ಗಂಟೆ ಸುಮಾರಿಗೆ ಉಜಿರೆ ಗ್ರಾಮದ ಪಾಣೆಯಾಲು ತಲುಪಿದಾಗ ಮಹೇಶ್‌ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿ ಕಾರಿನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ಬಳಿಕ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ವಿದ್ಯುತ್‌ ಕಂಬಕ್ಕೆ ಕಟ್ಟಿ ಹಾಕಿ ಕಲ್ಲಿನಿಂದ ದೇಹದ ಭಾಗಗಳಿಗೆ ಹಲ್ಲೆ ನಡೆಸಿದ್ದಾರೆ. ಜೋರಾಗಿ ಬೊಬ್ಬೆ ಹೊಡೆದಾಗ ಹತ್ತಿರದ ಮನೆಯಲಿದ್ದ ಪತ್ನಿ ಮಮತಾ ಬಿಡಿಸಲು ಪ್ರಯತ್ನಿಸಿದಾಗ, ಪ್ರಮೋದ್‌ ಶೆಟ್ಟಿ ಎಂಬಾತ ಪತ್ನಿಗೂ ಕಲ್ಲಿನಿಂದ ಹೊಡೆದಿದ್ದಾರೆ. ಇಬ್ಬರ ಬೊಬ್ಬೆ ಕೇಳಿ ಅದೇ ಮಾರ್ಗವಾಗಿ ಬರುತ್ತಿದ್ದ ಪರಿಚಯದವರಾದ ಜಯಪ್ರಕಾಶ್‌ ಶೆಟ್ಟಿ, ಶಂಕರ ಶೆಟ್ಟಿ, ತಿಮರೋಡಿ ಸುರೇಶ್‌ ನಾಯ್ಕ ಮತ್ತು ಇತರರನ್ನು ನೋಡಿ ಆರೋಪಿಗಳು ಹಲ್ಲೆಗೆ ಬಳಸಿದ ಕಲ್ಲನ್ನು ಸ್ಥಳದಲ್ಲಿ ಬಿಸಾಡಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಭಾಸ್ಕರ ನಾಯ್ಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಹಲ್ಲೆಗೊಳಗಾದ ಭಾಸ್ಕರ್‌ ನಾಯ್ಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸೆ. 3ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next